HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...