HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...