HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...