HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...