HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...