HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...