HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...