HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...