HomeUncategorizedಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

- Advertisement -
- Advertisement -

ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು ಕೊರೊನಾ ಪಾಸಿಟಿವ್‌‌ ಆಗಿದ್ದರು ಮತ್ತು ಒಂದು ವಾರದಲ್ಲಿ ಚೇತರಿಸಿಕೊಂಡಿದ್ದಾರೆ.

ವೈರಸ್‌ನ ಅನುವಂಶೀಯ ರಚನೆಯ ಬಗ್ಗೆ ಅಧ್ಯಯನ ಮಾಡಿದ ನಂತರ ರೋಗಿಯು ಕೊರೊನಾ ವೈರಸ್‌‌ನ XE ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆ ಎಂದು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದು XE ರೂಪಾಂತರವೇ ಆಗಿದೆ ಎಂದು ಖಚಿತಪಡಿಸಲು ಮಾದರಿಯನ್ನು ಮರುಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣ ಕೂಡಾ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ XE ಮತ್ತು XM ರೂಪಾಂತರ ಸೋಂಕಿತರಿಬ್ಬರ ಆರೋಗ್ಯ ಸ್ಥಿತಿಯ ಬಗ್ಗೆ ಅವರು ಯಾವುದೆ ಮಾಹಿತಿಯನ್ನು ನೀಡಿಲ್ಲ.

ಇದನ್ನೂ ಓದಿ: ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

XE ರೂಪಾಂತರವು BA 1 ಮತ್ತು BA 2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಓಮೈಕ್ರಾನ್‌‌ನ BA 2ನ ಉಪ ರೂಪಾಂತರಕ್ಕಿಂತ ಹೊಸ ರೂಪಾಂತರವಾದ XE ವೈರಸ್‌ 10 ಪಟ್ಟು ಹೆಚ್ಚು ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

XM ರೂಪಾಂತರ ಕೂಡಾ ಒಮಿಕ್ರಾನ್‌ನ BA 1 ಮತ್ತು BA 2 ತಳಿಗಳ ಉಪ ರೂಪಾಂತರ ವೈರಸ್‌‌ ಆಗಿದೆ.

ಈ ವಾರದ ಆರಂಭದಲ್ಲಿ, ವಿದೇಶ ಪ್ರಯಾಣ ಮಾಡಿದ್ದ ರೋಗಿಯು XE ರೂಪಾಂತರ ವೈರಸ್‌‌ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಆರೋಗ್ಯ ಸಚಿವಾಲಯವು ಈ ವರದಿಯನ್ನು ನಿರಾಕರಿಸಿದ್ದು, “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಹೇಳಿದೆ.

ಹೊಸ ರೂಪಾಂತರವು ಮೊದಲಿಗೆ ಇಂಗ್ಲೇಂಡಿನಲ್ಲಿ ಪತ್ತೆಯಾಗಿತ್ತು. ಇದು ಇತರ ಯಾವುದೆ ಕೊರೊನಾ ವೈರಸ್‌ಗಿಂತ ವೇಗವಾಗಿ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಹೇಳಿತ್ತು.

ಆದಾಗ್ಯೂ, ದೇಶದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಉಂಟುಮಾಡುವಷ್ಟು ಹೊಸ ರೂಪಾಂತರ ಪ್ರಬಲವಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಭಾರತದಲ್ಲಿನ ವೈರಾಲಜಿಸ್ಟ್‌ಗಳು ಹೇಳಿದ್ದಾರೆ. ಹೊಸ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್‌ನ ಉಪ- ರೂಪಾಂತರಗಳನ್ನು ಪತ್ತೆಹಚ್ಚಲಾಗಿದ್ದರೂ, ಇದುವರೆಗೆ ಸೋಂಕಿನ ಪ್ರಸರಣದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...