Homeಮುಖಪುಟಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

ಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

- Advertisement -
- Advertisement -

ಇಂದು ಭಾರತದಲ್ಲಿ ಕರೋನ ವೈರಸ್ ತಗುಲಿದ ಪ್ರಕರಣಗಳ ದಿಡೀರ್ ಏರಿಕೆಯಾಗಿದೆ. ಒಟ್ಟು 28 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 16 ಜನ ಇಟಲಿಯ ಪ್ರಜೆಗಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ತಿಂಗಳು ದೆಹಲಿಗೆ ಬಂದಿಳಿದ 15 ಇಟಾಲಿಯನ್ ಪ್ರವಾಸಿಗರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ಒಬ್ಬ ಭಾರತೀಯ ಸೇರಿದಂತೆ ಅವರೆಲ್ಲರಲ್ಲಿ ಕರೋನ ವೈರಸ್ ಇರುವುದು ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 28 ಕ್ಕೆ ಏರಿದ್ದರಿಂದ ಭಾರತವು ಇಂದು ಕರೋನವೈರಸ್ ಪ್ರಕರಣಗಳಲ್ಲಿ ಅತಿದೊಡ್ಡ ಏರಿಕೆಯನ್ನು ದಾಖಲಿಸಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ “ದೇಶದಲ್ಲಿ ಈವರೆಗೆ 28 ​​ಪ್ರಕರಣಗಳು ವರದಿಯಾಗಿವೆ, ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ. ಕಳೆದ ತಿಂಗಳು ವೈರಸ್‌ಗೆ ತುತ್ತಾದ ಕೇರಳದ ಇತರ ಮೂವರು ಗುಣಮುಖರಾಗಿದ್ದಾರೆ.

COVID-19 ಕೊರೊನಾ ವೈರಸ್‌ನ ಸನ್ನದ್ಧತೆಯ ಬಗ್ಗೆ ವ್ಯಾಪಕ ವಿಮರ್ಶೆ ನಡೆಸಿದೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ನಿನ್ನೆ ಟ್ವೀಟ್ ಮಾಡಿದ್ದರು.

ಇಂದು ಬೆಳಿಗ್ಗೆ, ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ “ಮುಂದಿನ ವಾರ ಯಾವುದೇ ಹೋಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ” ಎಂದು ಹೇಳಿದರಲ್ಲದೆ “ಕೊವಿಡ್-19 ನೋವೆಲ್ ಕೊರೊನಾವೈರಸ್ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ, ಈ ವರ್ಷ ಯಾವುದೇ ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಾನು ನಿರ್ಧರಿಸಿದ್ದೇನೆ” ಎಂದು ಪ್ರಧಾನಿ ಹೇಳಿದ್ದಾರೆ.

ಕರೋನ ವೈರಸ್ ತಗುಲಿದ 2 ರಿಂದ 14 ದಿನಗಳ ನಡುವೆ ಯಾವುದೇ ಸಮಯದಲ್ಲಿ ಅದರ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇದರ ಲಕ್ಷಣಗಳಾಗಿವೆ. ವಿಶ್ವಾದ್ಯಂತ ಸುಮಾರು 90,000 ಜನರಿಗೆ ಈ ಸೋಂಕು ತಗುಲಿದ್ದು, ಅವರಲ್ಲಿ ಸುಮಾರು 3,000 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...