Homeಮುಖಪುಟಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

ಕೊರೊನಾ ವೈರಸ್ 28 ಪ್ರಕರಣ ಪತ್ತೆ: ಭಾರತದಲ್ಲಿ ಹಠಾತ್ ಏರಿದ ಸಂಖ್ಯೆ

- Advertisement -
- Advertisement -

ಇಂದು ಭಾರತದಲ್ಲಿ ಕರೋನ ವೈರಸ್ ತಗುಲಿದ ಪ್ರಕರಣಗಳ ದಿಡೀರ್ ಏರಿಕೆಯಾಗಿದೆ. ಒಟ್ಟು 28 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 16 ಜನ ಇಟಲಿಯ ಪ್ರಜೆಗಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ತಿಂಗಳು ದೆಹಲಿಗೆ ಬಂದಿಳಿದ 15 ಇಟಾಲಿಯನ್ ಪ್ರವಾಸಿಗರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ಒಬ್ಬ ಭಾರತೀಯ ಸೇರಿದಂತೆ ಅವರೆಲ್ಲರಲ್ಲಿ ಕರೋನ ವೈರಸ್ ಇರುವುದು ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 28 ಕ್ಕೆ ಏರಿದ್ದರಿಂದ ಭಾರತವು ಇಂದು ಕರೋನವೈರಸ್ ಪ್ರಕರಣಗಳಲ್ಲಿ ಅತಿದೊಡ್ಡ ಏರಿಕೆಯನ್ನು ದಾಖಲಿಸಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ “ದೇಶದಲ್ಲಿ ಈವರೆಗೆ 28 ​​ಪ್ರಕರಣಗಳು ವರದಿಯಾಗಿವೆ, ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ. ಕಳೆದ ತಿಂಗಳು ವೈರಸ್‌ಗೆ ತುತ್ತಾದ ಕೇರಳದ ಇತರ ಮೂವರು ಗುಣಮುಖರಾಗಿದ್ದಾರೆ.

COVID-19 ಕೊರೊನಾ ವೈರಸ್‌ನ ಸನ್ನದ್ಧತೆಯ ಬಗ್ಗೆ ವ್ಯಾಪಕ ವಿಮರ್ಶೆ ನಡೆಸಿದೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ನಿನ್ನೆ ಟ್ವೀಟ್ ಮಾಡಿದ್ದರು.

ಇಂದು ಬೆಳಿಗ್ಗೆ, ತಜ್ಞರ ಹೇಳಿಕೆಯನ್ನು ಉಲ್ಲೇಖಿಸಿ “ಮುಂದಿನ ವಾರ ಯಾವುದೇ ಹೋಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ” ಎಂದು ಹೇಳಿದರಲ್ಲದೆ “ಕೊವಿಡ್-19 ನೋವೆಲ್ ಕೊರೊನಾವೈರಸ್ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ, ಈ ವರ್ಷ ಯಾವುದೇ ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಾನು ನಿರ್ಧರಿಸಿದ್ದೇನೆ” ಎಂದು ಪ್ರಧಾನಿ ಹೇಳಿದ್ದಾರೆ.

ಕರೋನ ವೈರಸ್ ತಗುಲಿದ 2 ರಿಂದ 14 ದಿನಗಳ ನಡುವೆ ಯಾವುದೇ ಸಮಯದಲ್ಲಿ ಅದರ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಇದರ ಲಕ್ಷಣಗಳಾಗಿವೆ. ವಿಶ್ವಾದ್ಯಂತ ಸುಮಾರು 90,000 ಜನರಿಗೆ ಈ ಸೋಂಕು ತಗುಲಿದ್ದು, ಅವರಲ್ಲಿ ಸುಮಾರು 3,000 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...