Homeನಿಜವೋ ಸುಳ್ಳೋಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ - ರಾಮ್‌ ದೇವ್:‌ ನಿಜವೇನು?

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

- Advertisement -
- Advertisement -

ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಏಪ್ರಿಲ್ 25, 2020 ರಂದು ಆಜ್ ತಕ್ ಚಾನೆಲ್‌ನೊಂದಿಗೆ ಇ-ಅಜೆಂಡಾ ಎಂಬ 24 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ ರಾಮದೇವ್ ಈ ಮೆಲಿನ ರೀತಿಯಾಗಿ ಹೇಳಿದ್ದಾರೆ. ಸಂದರ್ಶನದ ವೀಡಿಯೊ ನೋಡಿ.

ಯಾವುದೇ ಕಾಯಿಲೆ ಇರುವ ಅಥವಾ ಇಲ್ಲದ ವ್ಯಕ್ತಿಯು ಉಸಿರಾಡದೆ 30 ಸೆಕೆಂಡುಗಳು ಅಥವಾ ಒಂದು ನಿಮಿಷದವರೆಗೆ ತಮ್ಮ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ, ಅವರಿಗೆ COVID-19 ತಗುಲಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಕೊರೊನಾ ಬಂದಿರುವವರು ಇದ್ದರೆ, ಸಾಸಿವೆ ಎಣ್ಣೆಯ ಹನಿಗಳನ್ನು ಮೂಗಿಗೆ ಹಾಕಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿನ ಕೊರೊನಾ ವೈರಸ್‌ ಅನ್ನು ಕೊಲ್ಲುತ್ತದೆ ಎಂದು ಶಿಫಾರಸು ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌

ರಾಮ್‌ದೇವ್‌ರವರು ಹೇಳಿರುವ ಮೇಲಿನ ಎರಡೂ ಹೇಳಿಕೆಗಳು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿಲ್ಲ.

ಮೊದಲನೇಯದಾಗಿ ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ. ಜೀನಮ್ ಷಾರವರು ಹೇಳುವ ಹಾಗೆ “ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಅಧ್ಯಯನಗಳು ನಡೆದಿಲ್ಲ. ಕರೋನವೈರಸ್ ಅನ್ನು ಪರೀಕ್ಷಿಸುವ ಏಕೈಕ ಮಾರ್ಗವೆಂದರೆ RT-PCR ಪರೀಕ್ಷೆಯ ಮೂಲಕ” ಎಂದಿದ್ದಾರೆ.

COVID-19 ನ ಸಾಮಾನ್ಯ ಲಕ್ಷಣಗಳು ಜ್ವರ, ಒಣ ಕೆಮ್ಮು ಮತ್ತು ದಣಿವು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೆಲವು ರೋಗಿಗಳಿಗೆ ನೋವು, ನೆಗಡಿ ಮತ್ತು ಗಂಟಲು ನೋವು ಅಥವಾ ಅತಿಸಾರ ಇರಬಹುದು. ಹಾಗೆಯೇ ಐದರಲ್ಲಿ ಒಬ್ಬರಿಗೆ ಮಾತ್ರ ಉಸಿರಾಟದ ತೊಂದರೆ ಇರುತ್ತದೆ ಎಂದು ತಿಳಿಸಿದ್ದಾರೆ.

ಎರಡನೇಯದಾಗಿ ಸಾಸಿವೆ ಎಣ್ಣೆಯಿಂದ ಕರೋನವೈರಸ್ ಕೊಲ್ಲುತ್ತದೆ ಎನ್ನುವುದು. ಹೊಟ್ಟೆಯು ಗ್ಯಾಸ್ಟ್ರಿಕ್ ಜ್ಯೂಸ್ ರೂಪದಲ್ಲಿ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ ಆದರೆ ಈ ರಸಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತವೆ ಎಂಬುದನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ತೋರಿಸಿಲ್ಲ. ಈ ಕುರಿತು ಅಧ್ಯಯನಗಳು ನಡೆದಿಲ್ಲ. ಸಾಸಿವೆ ಎಣ್ಣೆ ಕೊರೊನಾ ವೈರಸ್‌ ಮೇಲೆ ಪರಿಣಾಮ ಬೀರುವ ಕುರಿತು ಯಾವುದೇ  ಅಧ್ಯಯನ ಅಥವಾ ಸಿದ್ಧಾಂತವಿಲ್ಲ ಎಂದು ಡಾ. ಜೀನಮ್ ಷಾ ಹೇಳಿದ್ದಾರೆ.

ಸಾಸಿವೆ ಎಣ್ಣೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳುತ್ತದೆ, ಬ್ಯಾಕ್ಟೀರಿಯಾ ನಿರೋಧಕ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ, ಕೆಂಪು ರಕ್ತ ಕಣಗಳನ್ನು ಬಲಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ನಿರ್ವಹಿಸುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡುತ್ತದೆ. ಆದರೆ ಕೊರೊನಾ ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ.


ಇದನ್ನೂ ಓದಿ: ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....