Homeನಿಜವೋ ಸುಳ್ಳೋಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ - ರಾಮ್‌ ದೇವ್:‌ ನಿಜವೇನು?

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

- Advertisement -
- Advertisement -

ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಏಪ್ರಿಲ್ 25, 2020 ರಂದು ಆಜ್ ತಕ್ ಚಾನೆಲ್‌ನೊಂದಿಗೆ ಇ-ಅಜೆಂಡಾ ಎಂಬ 24 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ ರಾಮದೇವ್ ಈ ಮೆಲಿನ ರೀತಿಯಾಗಿ ಹೇಳಿದ್ದಾರೆ. ಸಂದರ್ಶನದ ವೀಡಿಯೊ ನೋಡಿ.

ಯಾವುದೇ ಕಾಯಿಲೆ ಇರುವ ಅಥವಾ ಇಲ್ಲದ ವ್ಯಕ್ತಿಯು ಉಸಿರಾಡದೆ 30 ಸೆಕೆಂಡುಗಳು ಅಥವಾ ಒಂದು ನಿಮಿಷದವರೆಗೆ ತಮ್ಮ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ, ಅವರಿಗೆ COVID-19 ತಗುಲಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಕೊರೊನಾ ಬಂದಿರುವವರು ಇದ್ದರೆ, ಸಾಸಿವೆ ಎಣ್ಣೆಯ ಹನಿಗಳನ್ನು ಮೂಗಿಗೆ ಹಾಕಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿನ ಕೊರೊನಾ ವೈರಸ್‌ ಅನ್ನು ಕೊಲ್ಲುತ್ತದೆ ಎಂದು ಶಿಫಾರಸು ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌

ರಾಮ್‌ದೇವ್‌ರವರು ಹೇಳಿರುವ ಮೇಲಿನ ಎರಡೂ ಹೇಳಿಕೆಗಳು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿಲ್ಲ.

ಮೊದಲನೇಯದಾಗಿ ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ. ಜೀನಮ್ ಷಾರವರು ಹೇಳುವ ಹಾಗೆ “ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಅಧ್ಯಯನಗಳು ನಡೆದಿಲ್ಲ. ಕರೋನವೈರಸ್ ಅನ್ನು ಪರೀಕ್ಷಿಸುವ ಏಕೈಕ ಮಾರ್ಗವೆಂದರೆ RT-PCR ಪರೀಕ್ಷೆಯ ಮೂಲಕ” ಎಂದಿದ್ದಾರೆ.

COVID-19 ನ ಸಾಮಾನ್ಯ ಲಕ್ಷಣಗಳು ಜ್ವರ, ಒಣ ಕೆಮ್ಮು ಮತ್ತು ದಣಿವು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೆಲವು ರೋಗಿಗಳಿಗೆ ನೋವು, ನೆಗಡಿ ಮತ್ತು ಗಂಟಲು ನೋವು ಅಥವಾ ಅತಿಸಾರ ಇರಬಹುದು. ಹಾಗೆಯೇ ಐದರಲ್ಲಿ ಒಬ್ಬರಿಗೆ ಮಾತ್ರ ಉಸಿರಾಟದ ತೊಂದರೆ ಇರುತ್ತದೆ ಎಂದು ತಿಳಿಸಿದ್ದಾರೆ.

ಎರಡನೇಯದಾಗಿ ಸಾಸಿವೆ ಎಣ್ಣೆಯಿಂದ ಕರೋನವೈರಸ್ ಕೊಲ್ಲುತ್ತದೆ ಎನ್ನುವುದು. ಹೊಟ್ಟೆಯು ಗ್ಯಾಸ್ಟ್ರಿಕ್ ಜ್ಯೂಸ್ ರೂಪದಲ್ಲಿ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ ಆದರೆ ಈ ರಸಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತವೆ ಎಂಬುದನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ತೋರಿಸಿಲ್ಲ. ಈ ಕುರಿತು ಅಧ್ಯಯನಗಳು ನಡೆದಿಲ್ಲ. ಸಾಸಿವೆ ಎಣ್ಣೆ ಕೊರೊನಾ ವೈರಸ್‌ ಮೇಲೆ ಪರಿಣಾಮ ಬೀರುವ ಕುರಿತು ಯಾವುದೇ  ಅಧ್ಯಯನ ಅಥವಾ ಸಿದ್ಧಾಂತವಿಲ್ಲ ಎಂದು ಡಾ. ಜೀನಮ್ ಷಾ ಹೇಳಿದ್ದಾರೆ.

ಸಾಸಿವೆ ಎಣ್ಣೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳುತ್ತದೆ, ಬ್ಯಾಕ್ಟೀರಿಯಾ ನಿರೋಧಕ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ, ಕೆಂಪು ರಕ್ತ ಕಣಗಳನ್ನು ಬಲಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ನಿರ್ವಹಿಸುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡುತ್ತದೆ. ಆದರೆ ಕೊರೊನಾ ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ.


ಇದನ್ನೂ ಓದಿ: ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....