Homeನಿಜವೋ ಸುಳ್ಳೋಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ - ರಾಮ್‌ ದೇವ್:‌ ನಿಜವೇನು?

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

- Advertisement -
- Advertisement -

ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಏಪ್ರಿಲ್ 25, 2020 ರಂದು ಆಜ್ ತಕ್ ಚಾನೆಲ್‌ನೊಂದಿಗೆ ಇ-ಅಜೆಂಡಾ ಎಂಬ 24 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ ರಾಮದೇವ್ ಈ ಮೆಲಿನ ರೀತಿಯಾಗಿ ಹೇಳಿದ್ದಾರೆ. ಸಂದರ್ಶನದ ವೀಡಿಯೊ ನೋಡಿ.

ಯಾವುದೇ ಕಾಯಿಲೆ ಇರುವ ಅಥವಾ ಇಲ್ಲದ ವ್ಯಕ್ತಿಯು ಉಸಿರಾಡದೆ 30 ಸೆಕೆಂಡುಗಳು ಅಥವಾ ಒಂದು ನಿಮಿಷದವರೆಗೆ ತಮ್ಮ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ, ಅವರಿಗೆ COVID-19 ತಗುಲಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಕೊರೊನಾ ಬಂದಿರುವವರು ಇದ್ದರೆ, ಸಾಸಿವೆ ಎಣ್ಣೆಯ ಹನಿಗಳನ್ನು ಮೂಗಿಗೆ ಹಾಕಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿನ ಕೊರೊನಾ ವೈರಸ್‌ ಅನ್ನು ಕೊಲ್ಲುತ್ತದೆ ಎಂದು ಶಿಫಾರಸು ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌

ರಾಮ್‌ದೇವ್‌ರವರು ಹೇಳಿರುವ ಮೇಲಿನ ಎರಡೂ ಹೇಳಿಕೆಗಳು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿಲ್ಲ.

ಮೊದಲನೇಯದಾಗಿ ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ. ಜೀನಮ್ ಷಾರವರು ಹೇಳುವ ಹಾಗೆ “ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಅಧ್ಯಯನಗಳು ನಡೆದಿಲ್ಲ. ಕರೋನವೈರಸ್ ಅನ್ನು ಪರೀಕ್ಷಿಸುವ ಏಕೈಕ ಮಾರ್ಗವೆಂದರೆ RT-PCR ಪರೀಕ್ಷೆಯ ಮೂಲಕ” ಎಂದಿದ್ದಾರೆ.

COVID-19 ನ ಸಾಮಾನ್ಯ ಲಕ್ಷಣಗಳು ಜ್ವರ, ಒಣ ಕೆಮ್ಮು ಮತ್ತು ದಣಿವು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೆಲವು ರೋಗಿಗಳಿಗೆ ನೋವು, ನೆಗಡಿ ಮತ್ತು ಗಂಟಲು ನೋವು ಅಥವಾ ಅತಿಸಾರ ಇರಬಹುದು. ಹಾಗೆಯೇ ಐದರಲ್ಲಿ ಒಬ್ಬರಿಗೆ ಮಾತ್ರ ಉಸಿರಾಟದ ತೊಂದರೆ ಇರುತ್ತದೆ ಎಂದು ತಿಳಿಸಿದ್ದಾರೆ.

ಎರಡನೇಯದಾಗಿ ಸಾಸಿವೆ ಎಣ್ಣೆಯಿಂದ ಕರೋನವೈರಸ್ ಕೊಲ್ಲುತ್ತದೆ ಎನ್ನುವುದು. ಹೊಟ್ಟೆಯು ಗ್ಯಾಸ್ಟ್ರಿಕ್ ಜ್ಯೂಸ್ ರೂಪದಲ್ಲಿ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ ಆದರೆ ಈ ರಸಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತವೆ ಎಂಬುದನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ತೋರಿಸಿಲ್ಲ. ಈ ಕುರಿತು ಅಧ್ಯಯನಗಳು ನಡೆದಿಲ್ಲ. ಸಾಸಿವೆ ಎಣ್ಣೆ ಕೊರೊನಾ ವೈರಸ್‌ ಮೇಲೆ ಪರಿಣಾಮ ಬೀರುವ ಕುರಿತು ಯಾವುದೇ  ಅಧ್ಯಯನ ಅಥವಾ ಸಿದ್ಧಾಂತವಿಲ್ಲ ಎಂದು ಡಾ. ಜೀನಮ್ ಷಾ ಹೇಳಿದ್ದಾರೆ.

ಸಾಸಿವೆ ಎಣ್ಣೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳುತ್ತದೆ, ಬ್ಯಾಕ್ಟೀರಿಯಾ ನಿರೋಧಕ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ, ಕೆಂಪು ರಕ್ತ ಕಣಗಳನ್ನು ಬಲಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ನಿರ್ವಹಿಸುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡುತ್ತದೆ. ಆದರೆ ಕೊರೊನಾ ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ.


ಇದನ್ನೂ ಓದಿ: ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...