Homeನಿಜವೋ ಸುಳ್ಳೋಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ - ರಾಮ್‌ ದೇವ್:‌ ನಿಜವೇನು?

ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ – ರಾಮ್‌ ದೇವ್:‌ ನಿಜವೇನು?

- Advertisement -
- Advertisement -

ಒಬ್ಬರು ಉಸಿರನ್ನು ಮೂವತ್ತು ಸೆಕೆಂಡ್‌ಗಳಿಂದ ಒಂದು ನಿಮಿಷದವರೆಗೆ ಹಿಡಿದಿಟ್ಟುಕೊಳ್ಳುವುದು COVID-19 ಗೆ ಸ್ವಯಂ ರೋಗನಿರ್ಣಯ ಪರೀಕ್ಷೆಯಾಗಬಹುದು. ಹಾಗೆಯೇ ಮೂಗಿನ ಹೊಳ್ಳೆಗೆ ಸಾಸಿವೆ ಎಣ್ಣೆಯನ್ನು ಹಚ್ಚುವುದರಿಂದ ವ್ಯಕ್ತಿಯ ಹೊಟ್ಟೆಯಲ್ಲಿ ವೈರಸ್‌ನ್ನು ಕೊಲ್ಲಬಹುದು ಎಂದು ಯೋಗಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಏಪ್ರಿಲ್ 25, 2020 ರಂದು ಆಜ್ ತಕ್ ಚಾನೆಲ್‌ನೊಂದಿಗೆ ಇ-ಅಜೆಂಡಾ ಎಂಬ 24 ನಿಮಿಷಗಳ ವೀಡಿಯೊ ಸಂಭಾಷಣೆಯಲ್ಲಿ ರಾಮದೇವ್ ಈ ಮೆಲಿನ ರೀತಿಯಾಗಿ ಹೇಳಿದ್ದಾರೆ. ಸಂದರ್ಶನದ ವೀಡಿಯೊ ನೋಡಿ.

ಯಾವುದೇ ಕಾಯಿಲೆ ಇರುವ ಅಥವಾ ಇಲ್ಲದ ವ್ಯಕ್ತಿಯು ಉಸಿರಾಡದೆ 30 ಸೆಕೆಂಡುಗಳು ಅಥವಾ ಒಂದು ನಿಮಿಷದವರೆಗೆ ತಮ್ಮ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ, ಅವರಿಗೆ COVID-19 ತಗುಲಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಕೊರೊನಾ ಬಂದಿರುವವರು ಇದ್ದರೆ, ಸಾಸಿವೆ ಎಣ್ಣೆಯ ಹನಿಗಳನ್ನು ಮೂಗಿಗೆ ಹಾಕಿದರೆ ಅದು ಹೊಟ್ಟೆಗೆ ಹೋಗಿ ಅಲ್ಲಿನ ಕೊರೊನಾ ವೈರಸ್‌ ಅನ್ನು ಕೊಲ್ಲುತ್ತದೆ ಎಂದು ಶಿಫಾರಸು ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌

ರಾಮ್‌ದೇವ್‌ರವರು ಹೇಳಿರುವ ಮೇಲಿನ ಎರಡೂ ಹೇಳಿಕೆಗಳು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಂದ ದೃಢಪಟ್ಟಿಲ್ಲ.

ಮೊದಲನೇಯದಾಗಿ ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ. ಜೀನಮ್ ಷಾರವರು ಹೇಳುವ ಹಾಗೆ “ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಅಧ್ಯಯನಗಳು ನಡೆದಿಲ್ಲ. ಕರೋನವೈರಸ್ ಅನ್ನು ಪರೀಕ್ಷಿಸುವ ಏಕೈಕ ಮಾರ್ಗವೆಂದರೆ RT-PCR ಪರೀಕ್ಷೆಯ ಮೂಲಕ” ಎಂದಿದ್ದಾರೆ.

COVID-19 ನ ಸಾಮಾನ್ಯ ಲಕ್ಷಣಗಳು ಜ್ವರ, ಒಣ ಕೆಮ್ಮು ಮತ್ತು ದಣಿವು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೆಲವು ರೋಗಿಗಳಿಗೆ ನೋವು, ನೆಗಡಿ ಮತ್ತು ಗಂಟಲು ನೋವು ಅಥವಾ ಅತಿಸಾರ ಇರಬಹುದು. ಹಾಗೆಯೇ ಐದರಲ್ಲಿ ಒಬ್ಬರಿಗೆ ಮಾತ್ರ ಉಸಿರಾಟದ ತೊಂದರೆ ಇರುತ್ತದೆ ಎಂದು ತಿಳಿಸಿದ್ದಾರೆ.

ಎರಡನೇಯದಾಗಿ ಸಾಸಿವೆ ಎಣ್ಣೆಯಿಂದ ಕರೋನವೈರಸ್ ಕೊಲ್ಲುತ್ತದೆ ಎನ್ನುವುದು. ಹೊಟ್ಟೆಯು ಗ್ಯಾಸ್ಟ್ರಿಕ್ ಜ್ಯೂಸ್ ರೂಪದಲ್ಲಿ ಹೈಡ್ರೋಕ್ಲೋರಿಕ್ ಆಮ್ಲವನ್ನು ಹೊಂದಿರುತ್ತದೆ ಆದರೆ ಈ ರಸಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತವೆ ಎಂಬುದನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ತೋರಿಸಿಲ್ಲ. ಈ ಕುರಿತು ಅಧ್ಯಯನಗಳು ನಡೆದಿಲ್ಲ. ಸಾಸಿವೆ ಎಣ್ಣೆ ಕೊರೊನಾ ವೈರಸ್‌ ಮೇಲೆ ಪರಿಣಾಮ ಬೀರುವ ಕುರಿತು ಯಾವುದೇ  ಅಧ್ಯಯನ ಅಥವಾ ಸಿದ್ಧಾಂತವಿಲ್ಲ ಎಂದು ಡಾ. ಜೀನಮ್ ಷಾ ಹೇಳಿದ್ದಾರೆ.

ಸಾಸಿವೆ ಎಣ್ಣೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ದೇಹದ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳುತ್ತದೆ, ಬ್ಯಾಕ್ಟೀರಿಯಾ ನಿರೋಧಕ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ, ಕೆಂಪು ರಕ್ತ ಕಣಗಳನ್ನು ಬಲಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ನಿರ್ವಹಿಸುತ್ತದೆ ಮತ್ತು ಮಧುಮೇಹವನ್ನು ಕಡಿಮೆ ಮಾಡುತ್ತದೆ. ಆದರೆ ಕೊರೊನಾ ಕಡಿಮೆ ಮಾಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ.


ಇದನ್ನೂ ಓದಿ: ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...