Homeಮುಖಪುಟಕೊರೋನಾ ವೈರಸ್ ಭೀತಿ: ಯುರೋಪ್‌ ಪ್ರವಾಸ ರದ್ದುಗೊಳಿಸಿದ ನರೇಂದ್ರ ಮೋದಿ

ಕೊರೋನಾ ವೈರಸ್ ಭೀತಿ: ಯುರೋಪ್‌ ಪ್ರವಾಸ ರದ್ದುಗೊಳಿಸಿದ ನರೇಂದ್ರ ಮೋದಿ

- Advertisement -
- Advertisement -

ಕೊರೋನವೈರಸ್ ಭೀತಿಯಿಂದಾಗಿ ಬೆಲ್ಜಿಯಂನ ರಾಜಧಾನಿ ಬ್ರಸೆಲ್‌ನಲ್ಲಿ ನಡೆಯಬೇಕಿದ್ದ ಭಾರತ-ಯುರೋಪಿಯನ್ ಯೂನಿಯನ್ (ಇಯು)  ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ ತಿಳಿಸಿದೆ.

“ಭಾರತ-ಇಯು ಶೃಂಗಸಭೆಗೆ ಸಂಬಂಧಿಸಿದಂತೆ, ಪ್ರಧಾನಿ ಮೋದಿ ಹಾಜರಾಗಬೇಕಾಗಿತ್ತು, ಎರಡೂ ದೇಶಗಳ ಆರೋಗ್ಯ ಅಧಿಕಾರಿಗಳು ಪ್ರಸ್ತುತ ಪ್ರಯಾಣ ನಡೆಯಬಾರದು ಎಂದು ಸೂಚಿಸಿದರು. ಆದ್ದರಿಂದ, ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕದಂದು ಮರು ನಿಗದಿಪಡಿಸಲು ಎಂದು ನಿರ್ಧರಿಸಲಾಗಿದೆ, ” ಎಂದು ಎಂಇಎ ವಕ್ತಾರ ರವೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಇಯು ಮತ್ತು ಭಾರತದ ನಡುವಿನ ನಿಕಟ ಸಹಕಾರದ ಉತ್ಸಾಹದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ಅವರು ಜಾಗತಿಕ ಆರೋಗ್ಯದ ಬಗ್ಗೆ ಒಂದೇ ರೀತಿಯ ಕಾಳಜಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳುತ್ತಾರೆ ಮತ್ತು  ಶೀಘ್ರದಲ್ಲೇ ಸಭೆ ನಡೆಯಲಿದೆ ಎಂದು ಭಾವಿಸುತ್ತೇವೆ” ಎಂದು ಅವರು ಹೇಳಿದರು.

ಬ್ರಸೆಲ್ಸ್‌ನಲ್ಲಿನ ಯುರೋಪಿಯನ್ ಯೂನಿಯನ್ ಆಡಳಿತದಲ್ಲಿ ಕೆಲಸ ಮಾಡುತ್ತಿರುವ ಕನಿಷ್ಠ ಇಬ್ಬರು ಸಿಬ್ಬಂದಿಗೆ ಕರೋನವೈರಸ್ ಹರಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಯುರೋಪಿಯನ್ ಅಧಿಕಾರಿಗಳು ಬುಧವಾರ ತಿಳಿಸಿದ್ದರು.

ಮೊದಲ ಪ್ರಕರಣದಲ್ಲಿ ಯುರೋಪಿಯನ್ ಡಿಫೆನ್ಸ್ ಏಜೆನ್ಸಿಯಲ್ಲಿ (ಇಡಿಎ) ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಫೆಬ್ರವರಿ 23 ರಂದು ಇಟಲಿಯಿಂದ ಹಿಂದಿರುಗಿದ್ದರು. ಹಾಗಾಗಿ ವೈರಸ್‌ ಅವರಿಗೆ ತಗುಲಿದ್ದು ಅವರಿಂದ ಯುರೋಪಿಯನ್ ಕೌನ್ಸಿಲ್‌ನ ಭದ್ರತೆಯಲ್ಲಿ ಕೆಲಸ ಮಾಡುವ ಎರಡನೆಯ ವ್ಯಕ್ತಿಗೆ ಹರಡಿದೆ ಎಂದು ಹೇಳಲಾಗಿದೆ.

ಮಾರ್ಚ್ 13 ರವರೆಗೆ ಬ್ರಸೆಲ್ಸ್ ಮೂಲದ ಇಡಿಎಯ ಪ್ರಧಾನ ಕಚೇರಿಯಲ್ಲಿ ನಡೆಯಬೇಕಿದ್ದ ಎಲ್ಲಾ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಇಡಿಎಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಎಲಿಸಬೆತ್ ಸ್ಕೋಫ್ಮನ್ ಹೇಳಿದ್ದಾರೆ.

ದೊಡ್ಡ ಸಭೆಗಳು ಏಕಾಏಕಿ ವೈರಲಸ್‌ ಹರಡುವಿಕೆಯನ್ನು ತ್ವರಿತಗೊಳಿಸಬಹುದೆಂಬ ಆತಂಕದ ನಡುವೆ, ಸಂಸತ್ತು ಈಗಾಗಲೇ ಬ್ರಸೆಲ್ಸ್ ಮತ್ತು ಸ್ಟ್ರಾಸ್‌ಬರ್ಗ್‌ನಲ್ಲಿನ ತನ್ನ ಕಟ್ಟಡಗಳಿಗೆ ಸಾರ್ವಜನಿಕ ಪ್ರವೇಶವನ್ನು ಸೀಮಿತಗೊಳಿಸಿದೆ.

ಚೀನಾದಲ್ಲಿ ವೈರಸ್ ಸ್ಫೋಟಗೊಂಡಾಗಿನಿಂದ ವಿಶ್ವದಾದ್ಯಂತ 90,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸುಮಾರು 3,200 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...