Homeಕರೋನಾ ತಲ್ಲಣಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು "ಸಣ್ಣ ಜ್ವರ" ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು.

- Advertisement -
- Advertisement -

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಆರ್ಥಿಕತೆಯನ್ನು ಆವರಿಸಿರುವ ಆರೋಗ್ಯ ಬಿಕ್ಕಟ್ಟಿನ ಉಲ್ಬಣದ ನಡುವೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

“ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ” ಎಂದು ಬೋಲ್ಸನಾರೊ CNN ಬ್ರೆಜಿಲ್ ನ ನೇರ ಸಂದರ್ಶನದಲ್ಲಿ ತಮ್ಮ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದ ನಂತರ ಹೇಳಿದ್ದಾರೆ.  ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಮಲೇರಿಯಾ ವಿರೋಧಿ ಔಷಧಿಯನ್ನು ತೆಗೆದುಕೊಳ್ಳುತ್ತಿರುವ ಅವರು, ಇದು ವೈರಸ್ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದಿದ್ದಾರೆ. ಆದರೆ ಇದರ ಬಳಕೆಯನ್ನು ಜಾಗತಿಕವಾಗಿ ಹೆಚ್ಚಿನ ಆರೋಗ್ಯ ತಜ್ಞರು ಅಧಿಕೃತಗೊಳಿಸಿಲ್ಲ. ಹಾಗೆಯೇ ಇದು ಅಪಾಯಕಾರಿ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದೂ ಹೇಳಿದ್ದಾರೆ.

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು “ಸಣ್ಣ ಜ್ವರ” ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು ಎಂಬ ಆರೋಪಗಳು ಅವರ ಮೇಲಿವೆ.

ಬೋಲ್ಸನಾರೊ ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಕಾಣಿಸಿಕೊಂಡ ಸಂದರ್ಭದಲ್ಲಿ ಕೆಮ್ಮುವುದನ್ನು ಕಾಣಬಹುದು. ಅವರ ಪಕ್ಕದಲ್ಲಿ ಕುಳಿತಿದ್ದ ಆರು ಜನರಲ್ಲಿ ಯಾರೂ ಮಾಸ್ಕ್ ಧರಿಸಲಿಲ್ಲ. ಅಲ್ಲಿದ್ದ ಅಧಿಕಾರಿಗಳಲ್ಲಿ ಪ್ರಾದೇಶಿಕ ಅಭಿವೃದ್ಧಿ ಸಚಿವ ರೊಜೆರಿಯೊ ಮರಿನ್ಹೋ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಕೈಕ್ಸಾ ಎಕನಾಮಿಕಾ ಫೆಡರಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೆಡ್ರೊ ಗುಯಿಮರೇಸ್ ಸೇರಿದ್ದಾರೆ. ಅಂದಿನಿಂದ, ಅವರು ತಮ್ಮ ಆಡಳಿತದ ಸದಸ್ಯರು ಮತ್ತು ಸಾರ್ವಜನಿಕರೊಂದಿಗೆ ಬೆರೆಯುತ್ತಿದ್ದರು. ಜೊತೆಗೆ ಶನಿವಾರ ಬ್ರೆಜಿಲ್‌ನ US ರಾಯಭಾರಿಯೊಂದಿಗೆ ಊಟ ಮಾಡಿದ್ದರು.

ಬೋಲ್ಸನಾರೊರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿರುವುದು ಇದೇ ಮೊದಲಲ್ಲ. ಇದುವರೆಗೂ ಮೂರು ಬಾರಿ ಅವರ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿತ್ತು. ಲಕ್ಷಣಗಳು ಕಾಣಿಸಿಕೊಂಡ ನಂತರ ನಾಲ್ಕನೇ ಬಾರಿಯ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಹೊಂಡುರಾನ್ ಅಧ್ಯಕ್ಷ ಜುವಾನ್ ಒರ್ಲ್ಯಾಂಡೊ ಹೆರ್ನಾಂಡೆಜ್ ಮತ್ತು ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಕೊರೊನಾ ದೃಢಪಟ್ಟಿರುವ ಇತರ ವಿಶ್ವ ನಾಯಕರ ಸಾಲಿಗೆ ಬೋಲ್ಸನಾರೊ ಸೇರಿಕೊಳ್ಳುತ್ತಾರೆ.


ಇದನ್ನೂ ಓದಿ : ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...