Homeಕರೋನಾ ತಲ್ಲಣಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು "ಸಣ್ಣ ಜ್ವರ" ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು.

- Advertisement -
- Advertisement -

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಆರ್ಥಿಕತೆಯನ್ನು ಆವರಿಸಿರುವ ಆರೋಗ್ಯ ಬಿಕ್ಕಟ್ಟಿನ ಉಲ್ಬಣದ ನಡುವೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

“ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ” ಎಂದು ಬೋಲ್ಸನಾರೊ CNN ಬ್ರೆಜಿಲ್ ನ ನೇರ ಸಂದರ್ಶನದಲ್ಲಿ ತಮ್ಮ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದ ನಂತರ ಹೇಳಿದ್ದಾರೆ.  ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಮಲೇರಿಯಾ ವಿರೋಧಿ ಔಷಧಿಯನ್ನು ತೆಗೆದುಕೊಳ್ಳುತ್ತಿರುವ ಅವರು, ಇದು ವೈರಸ್ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದಿದ್ದಾರೆ. ಆದರೆ ಇದರ ಬಳಕೆಯನ್ನು ಜಾಗತಿಕವಾಗಿ ಹೆಚ್ಚಿನ ಆರೋಗ್ಯ ತಜ್ಞರು ಅಧಿಕೃತಗೊಳಿಸಿಲ್ಲ. ಹಾಗೆಯೇ ಇದು ಅಪಾಯಕಾರಿ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದೂ ಹೇಳಿದ್ದಾರೆ.

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು “ಸಣ್ಣ ಜ್ವರ” ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು ಎಂಬ ಆರೋಪಗಳು ಅವರ ಮೇಲಿವೆ.

ಬೋಲ್ಸನಾರೊ ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಕಾಣಿಸಿಕೊಂಡ ಸಂದರ್ಭದಲ್ಲಿ ಕೆಮ್ಮುವುದನ್ನು ಕಾಣಬಹುದು. ಅವರ ಪಕ್ಕದಲ್ಲಿ ಕುಳಿತಿದ್ದ ಆರು ಜನರಲ್ಲಿ ಯಾರೂ ಮಾಸ್ಕ್ ಧರಿಸಲಿಲ್ಲ. ಅಲ್ಲಿದ್ದ ಅಧಿಕಾರಿಗಳಲ್ಲಿ ಪ್ರಾದೇಶಿಕ ಅಭಿವೃದ್ಧಿ ಸಚಿವ ರೊಜೆರಿಯೊ ಮರಿನ್ಹೋ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಕೈಕ್ಸಾ ಎಕನಾಮಿಕಾ ಫೆಡರಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೆಡ್ರೊ ಗುಯಿಮರೇಸ್ ಸೇರಿದ್ದಾರೆ. ಅಂದಿನಿಂದ, ಅವರು ತಮ್ಮ ಆಡಳಿತದ ಸದಸ್ಯರು ಮತ್ತು ಸಾರ್ವಜನಿಕರೊಂದಿಗೆ ಬೆರೆಯುತ್ತಿದ್ದರು. ಜೊತೆಗೆ ಶನಿವಾರ ಬ್ರೆಜಿಲ್‌ನ US ರಾಯಭಾರಿಯೊಂದಿಗೆ ಊಟ ಮಾಡಿದ್ದರು.

ಬೋಲ್ಸನಾರೊರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿರುವುದು ಇದೇ ಮೊದಲಲ್ಲ. ಇದುವರೆಗೂ ಮೂರು ಬಾರಿ ಅವರ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿತ್ತು. ಲಕ್ಷಣಗಳು ಕಾಣಿಸಿಕೊಂಡ ನಂತರ ನಾಲ್ಕನೇ ಬಾರಿಯ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಹೊಂಡುರಾನ್ ಅಧ್ಯಕ್ಷ ಜುವಾನ್ ಒರ್ಲ್ಯಾಂಡೊ ಹೆರ್ನಾಂಡೆಜ್ ಮತ್ತು ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಕೊರೊನಾ ದೃಢಪಟ್ಟಿರುವ ಇತರ ವಿಶ್ವ ನಾಯಕರ ಸಾಲಿಗೆ ಬೋಲ್ಸನಾರೊ ಸೇರಿಕೊಳ್ಳುತ್ತಾರೆ.


ಇದನ್ನೂ ಓದಿ : ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...