Homeನಿಜವೋ ಸುಳ್ಳೋFact check: ಇಟಲಿಯ ಉದ್ಯಮಿ ತನ್ನ ಹೋಟೆಲ್‌ನಿಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜವೇ?

Fact check: ಇಟಲಿಯ ಉದ್ಯಮಿ ತನ್ನ ಹೋಟೆಲ್‌ನಿಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜವೇ?

- Advertisement -
- Advertisement -

“ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕನೊಬ್ಬನ ಕುಟುಂಬಿಕರೆಲ್ಲರೂ ಕೊರೊನಾ ವೈರಸ್ ನಿಂದ ಸಾವಿಗೀಡಾಗಿದ್ದಕ್ಕೆ ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ತಲೆ ಬರಹ ಬರೆದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು ಇದರ ಬಗ್ಗೆ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದೆ.

ಕನ್ನಡದ ಶೀರ್ಷಿಕೆಯೊಂದಿಗೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಲವಾರು ಜನರು ಫೇಸ್ಬುಕ್ಕಿನಲ್ಲಿ ಈ ವಿಡಿಯೊವನ್ನು #Coronaeffect ಹ್ಯಾಶ್ ಟ್ಯಾಗ್ ನೊಂದಿಗೆ ಶೇರ್ ಮಾಡಿದ್ದಾರೆ.

ಎಂಟರ್ಟೈನ್ಮೆಂಟ್ ಎಂಬ ಪೇಜ್ “ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕ, ತನ್ನ ಕುಟುಂಬದ ಎಲ್ಲಾ ಸದಸ್ಯರನ್ನು ಕೊರೋನಾ ವೈರಸ್ ನಿಂದ ಕಳೆದುಕೊಂಡು ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು…” ಎಂಬ ಬರಹದೊಂದಿಗೆ ಈ ವಿಡಿಯೋ ಪ್ರಸಾರ ಮಾಡಿದೆ.

#Coronaeffect ?????

ಇಟಲಿಯ ಕೋಟ್ಯಾಧಿಪತಿ ಹೋಟೆಲ್ ಮಾಲೀಕ, ತನ್ನ ಕುಟುಂಬದ ಎಲ್ಲಾ ಸದಸ್ಯರನ್ನು ಕೊರೋನಾ ವೈರಸ್ ನಿಂದ ಕಳೆದುಕೊಂಡು ಹತಾಶನಾಗಿ ತನ್ನ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು…

Posted by Entertainment on Sunday, April 5, 2020

1 ನಿಮಿಷ 59 ಸೆಕೆಂಡುಗಳ ವೀಡಿಯೊವು ಸೈರನ್ ಮತ್ತು ಜನರು ಎತ್ತರದ ಕಟ್ಟಡವನ್ನು ನೋಡುತ್ತಾ ಗದ್ದಲ ಮಾಡುವ ಹಾಗೂ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿಯುವುದನ್ನು ತೋರಿಸುತ್ತದೆ. ಅಲ್ಲದೆ ಬೇರೆ ಪೇಜ್ ಗಳಲ್ಲೂ ಇದೇ ವಿಡಿಯೊ ಅದೇ ತಲೆಬರಹದಲ್ಲಿ ಹಂಚಿಕೊಳ್ಳಲಾಗಿದೆ.

ಅದಲ್ಲದೆ ಬೇರೆ ಹಲವು ಜನರೂ ಈ ವಿಡಿಯೋವನ್ನು ಅದೇ ತಲೆ ಬರಹದಲ್ಲಿ ಹಂಚಿದ್ದಾರೆ.

ಫ್ಯಾಕ್ಟ್ ಚೆಕ್:

ಈ ವೀಡಿಯೋ 2015 ರ ವಿಡಿಯೊವಾಗಿದ್ದು, ಅಮೆರಿಕದ ಫಿಲಡೆಲ್ಫಿಯಾದಲ್ಲಿನ ಎತ್ತರದ ಹೋಟೆಲ್‌ನಿಂದ ಉದ್ಯಮಿಯೊಬ್ಬರು ಹಾರಿದ್ದಾಗಿದೆ ಎಂದು ಭೂಮ್ ಲೈವ್ ಇದರ ಮೂಲವನ್ನು ಕಂಡು ಹಿಡಿದು ಹೇಳಿದೆ. ಇದೇ ವೀಡಿಯೊವನ್ನು ಇತರ ಸುಳ್ಳುಗಳಿಗೆ ಕೂಡಾ ಬಳಸಿಕೊಳ್ಳಲಾಗಿತ್ತು.

ಆಗಸ್ಟ್ 2015 ರಲ್ಲಿ Ọmọ Oòdua ಎಂಬ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಮಾಡಿದ ದೀರ್ಘ ಆವೃತ್ತಿಯ ವೀಡಿಯೋ ಇದಾಗಿದ್ದು, ವೀಡಿಯೊದಲ್ಲಿನ ಶೀರ್ಷಿಕೆ ಸುಳ್ಳಾಗಿದ್ದರೂ ‘ಗ್ರಾಫಿಕ್: ಗರ್ಭಿಣಿ ಘಾನಿಯನ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡುವ ಆಘಾತಕಾರಿ ವಿಡಿಯೋ…” ಎಂದು ಬರೆಯಲಾಗಿದೆ.

Graphic: Pregnant Ghanaian Woman jumps off the Cliff

Suicide Pregnant Ghanaian Jumps BuildingShocking VideoGhanaian Woman jumps off the Cliff as Hubby sleeps with Her Mom. Pregnant Ghanaian Woman Jumps From 40 Storey Building Because Her Husband Was Sleeping With Her Mom and was carrying her husbands child,40 Storey Building jumpingMust she commit suicide?Comment your opinion and share

Posted by Ọmọ Oòdua on Monday, August 10, 2015

ವೀಡಿಯೊದಲ್ಲಿ ವ್ಯಕ್ತಿಯೂ ಕಟ್ಟಡದಿಂದ ಜಿಗಿದ ನಂತರ 49 ಸೆಕೆಂಡುಗಳಲ್ಲಿ, “215-232-2000” ನಂಬರ್ ಇರುವ ಕಾರನ್ನು ನೋಡಬಹುದು.

ಈ ಸಂಖ್ಯೆಯ ಕಾರು ಫಿಲಡೆಲ್ಫಿಯಾ ಪ್ರದೇಶದ್ದಾಗಿದ್ದು, ಈ ಕಾರು ಬಾಡಿಗೆ ಕ್ಯಾಬಿನ ಕಾರಾಗಿದೆ. ( ಕಾರುಗಳ ಬಗ್ಗೆ ಇಲ್ಲಿ ನೋಡಿ PHLcabs )

ನಂತರ ಗೂಗಲ್ ನಲ್ಲಿ ಹುಡುಕಾಟ ನಡೆಸಿದಾಗ – ಎಂಬಸಿ ಸೂಟ್ಸ್ ಹೋಟೆಲಿನ 25 ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿದ ಬಗೆಗಿನ ಪ್ರಕರಣದ ಬಗ್ಗೆ 2015 ಸುದ್ದಿಯರುವ ವರದಿ ಲಭಿಸಿದೆ.

ಸ್ಥಳೀಯ ಮಾಧ್ಯಮವಾದ “ಫಿಲ್ಲಿ ವಾಯ್ಸ್‌”ನಲ್ಲಿ ಮೇ 2, 2015 ರಂದು ಪ್ರಕಟವಾದ ವರದಿಯೊಂದು ಈ ಘಟನೆಯನ್ನು ವಿವರಿಸಿದೆ ಹಾಗೂ ಮೇ 6, 2015 ರಂದು ಪ್ರಕಟವಾದ ಅದರ ಬಗ್ಗೆ ಮುಂದುವರೆದ ವರದಿಯೂ ಹಾರಿದ ವ್ಯಕ್ತಿಯನ್ನು ಉದ್ಯಮಿ ಎಂದು ಗುರುತಿಸಿದೆ.

ವೈರಲ್ ವೀಡಿಯೊದಲ್ಲಿ ಇರುವ ಸ್ಥಳವು ಸರಿಯಾಗಿದೆಯೇ ಎಂದು ಪರಿಶೀಲಿಸಿದಾಗ, ಅದು ಸೆಂಟರ್ ನಗರದಲ್ಲಿರುವ ಎಂಬೆಸಿ ಸೂಟ್ಸ್ ಹೋಟೆಲ್ ಎಂದು ದೃಡಪಟ್ಟಿದೆ.

ಭೂಮ್ ಲೈವ್ ಎಂಬೆಸಿ ಸೂಟ್ಸ್ ಹೋಟೆಲ್ ಅನ್ನು ಸಂಪರ್ಕಿಸಿ, ಘಟನೆ ನಡೆದಿರುವ ಬಗ್ಗೆ ದೃಡಪಡಿಸಿದೆ ಎಂದು ಹೇಳಿದೆ.

ಕೊರೊನಾ ವೈರಸ್ ಬಗ್ಗೆ ದೇಶದಾದ್ಯಂತ ಹಲವಾರು ಸುಳ್ಳುಗಳು ಹರಡುತ್ತಿದೆ. ಸರಿಯಾಗಿ ಗಮನಿಸಿದರೆ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವಲ್ಲಿ ಹೆಚ್ಚಿನವರು ಬಲಪಂಥೀಯರಾಗಿದ್ದಾರೆ ಅಥವಾ ಬಲಪಂಥೀಯ ಗುಂಪಿನಲ್ಲಿ ಗುರುತಿಸಿ ಕೊಂಡವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...