Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಶನಿವಾರ ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಆದರೆ ಈ ವ್ಯಾಕ್ಸಿನೇಷನ್‌ನಿಂದ ದೆಹಲಿಯಲ್ಲಿ 51 ಸಣ್ಣಪುಟ್ಟ ಪ್ರತಿಕೂಲ ಪರಿಣಾಮ ಬೀರಿದ್ದು ವರದಿಯಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ. ಒಂದು ಗಂಭೀರ ಪ್ರಕರಣ ವರದಿಯಾಗಿದ್ದು, ಆ ರೋಗಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಯಲ್ಲಿ ದಾಖಲಿಸಲಾಗಿದೆ.

“ನಿನ್ನೆ ಒಂದು ದಿನದಲ್ಲಿ ಸಣ್ಣ ಪುಟ್ಟ 51 ಘಟನೆಗಳು ನಡೆದಿವೆ, ಅವುಗಳಲ್ಲಿ ಕೆಲವು ಸಣ್ಣಪುಟ್ಟ ತೊಂದರೆಗಳಾಗಿವೆ. ಒಂದು ಪ್ರಕರಣವಷ್ಟೇ ಸ್ವಲ್ಪ ಗಂಭೀರವಾಗಿದ್ದು, ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಕಳೆದ ರಾತ್ರಿಯವರೆಗೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು” ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

“ದೆಹಲಿಯಲ್ಲಿ ಕೇವಲ ಒಬ್ಬರನ್ನಷ್ಟೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಉಳಿದ 51 ಜನರನ್ನು ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿಲ್ಲ. ಅವರ ಮೇಲೆ ಸ್ವಲ್ಪ ಸಮಯದವರೆಗೆ ನಿಗಾ ವಹಿಸಲಾಯಿತು” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಏಮ್ಸ್‌ನಲ್ಲಿ ದಾಖಲಾದ ರೋಗಿಯು ಆಸ್ಪತ್ರೆಯಲ್ಲಿ ಕೆಲಸ ಮಾಡುವ 22 ವರ್ಷದ ಭದ್ರತಾ ಸಿಬ್ಬಂದಿಯಾಗಿದ್ದು, ನಿನ್ನೆ ರಾತ್ರಿಯವರೆಗೂ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಈಗ ಸ್ಥಿರವಾಗಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಮೊದಲ ದಿನ 4,000 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಏಮ್ಸ್‌ನಂತಹ ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಎಲ್ಲರಿಗೂ ಕೋವಿಶೀಲ್ಡ್ ನೀಡಲಾಗಿದೆ. ಇದನ್ನು ಆಕ್ಸ್‌ಫರ್ಡ್ ಯುನಿವರ್ಸಿಟಿಯು ಅಸ್ಟ್ರಾಜೆನೆಕಾ ಫಾರ್ಮಾ ಜೊತೆ ಅಭಿವೃದ್ಧಿಪಡಿಸಿದ್ದು, ಭಾರತದಲ್ಲಿ ಇದನ್ನು ಸೀರಮ್ ಇನ್ಸ್ಟಿಟ್ಯೂಟ್ ತಯಾರಿಸಿದೆ.

ಕೇಂದ್ರ ಸರ್ಕಾರ ನಡೆಸುವ ಆರು ಆಸ್ಪತ್ರೆಗಳಿಗೆ ಭಾರತ್ ಬಯೋಟೆಕ್‌ನ ತಯಾರಿಕೆಯ ಕೊವಾಕ್ಸಿನ್ ನೀಡಲಾಗಿದ್ದು, ಇದು ಇನ್ನೂ ಪ್ರಾಯೋಗಿಕ ಹಂತದಲ್ಲಿದೆ. ಭಾರತೀಯ ಔಷಧ ನಿಯಂತ್ರಕವು ಈ ಲಸಿಕೆಗೆ ಅನುಮತಿ ನೀಡಿದಾಗ ಅದರ ಕ್ಲಿನಿಕಲ್ ಪ್ರಯೋಗ ನಡೆಯುತ್ತಿತ್ತು.

ದೆಹಲಿಯು ಮೊದಲ ದಿನ 8,117 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿತ್ತು, ಆದರೆ ನಗರದಾದ್ಯಂತ ಕಾರ್ಯನಿರ್ವಹಿಸುತ್ತಿದ್ದ 81 ತಾಣಗಳಲ್ಲಿ ಅರ್ಧದಷ್ಟು ಮಾತ್ರ ಲಸಿಕೆ ಹಾಕಲಾಯಿತು.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...