Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಶನಿವಾರ ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಆದರೆ ಈ ವ್ಯಾಕ್ಸಿನೇಷನ್‌ನಿಂದ ದೆಹಲಿಯಲ್ಲಿ 51 ಸಣ್ಣಪುಟ್ಟ ಪ್ರತಿಕೂಲ ಪರಿಣಾಮ ಬೀರಿದ್ದು ವರದಿಯಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ. ಒಂದು ಗಂಭೀರ ಪ್ರಕರಣ ವರದಿಯಾಗಿದ್ದು, ಆ ರೋಗಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಯಲ್ಲಿ ದಾಖಲಿಸಲಾಗಿದೆ.

“ನಿನ್ನೆ ಒಂದು ದಿನದಲ್ಲಿ ಸಣ್ಣ ಪುಟ್ಟ 51 ಘಟನೆಗಳು ನಡೆದಿವೆ, ಅವುಗಳಲ್ಲಿ ಕೆಲವು ಸಣ್ಣಪುಟ್ಟ ತೊಂದರೆಗಳಾಗಿವೆ. ಒಂದು ಪ್ರಕರಣವಷ್ಟೇ ಸ್ವಲ್ಪ ಗಂಭೀರವಾಗಿದ್ದು, ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಕಳೆದ ರಾತ್ರಿಯವರೆಗೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು” ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

“ದೆಹಲಿಯಲ್ಲಿ ಕೇವಲ ಒಬ್ಬರನ್ನಷ್ಟೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಉಳಿದ 51 ಜನರನ್ನು ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿಲ್ಲ. ಅವರ ಮೇಲೆ ಸ್ವಲ್ಪ ಸಮಯದವರೆಗೆ ನಿಗಾ ವಹಿಸಲಾಯಿತು” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಏಮ್ಸ್‌ನಲ್ಲಿ ದಾಖಲಾದ ರೋಗಿಯು ಆಸ್ಪತ್ರೆಯಲ್ಲಿ ಕೆಲಸ ಮಾಡುವ 22 ವರ್ಷದ ಭದ್ರತಾ ಸಿಬ್ಬಂದಿಯಾಗಿದ್ದು, ನಿನ್ನೆ ರಾತ್ರಿಯವರೆಗೂ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಈಗ ಸ್ಥಿರವಾಗಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಮೊದಲ ದಿನ 4,000 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಏಮ್ಸ್‌ನಂತಹ ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಎಲ್ಲರಿಗೂ ಕೋವಿಶೀಲ್ಡ್ ನೀಡಲಾಗಿದೆ. ಇದನ್ನು ಆಕ್ಸ್‌ಫರ್ಡ್ ಯುನಿವರ್ಸಿಟಿಯು ಅಸ್ಟ್ರಾಜೆನೆಕಾ ಫಾರ್ಮಾ ಜೊತೆ ಅಭಿವೃದ್ಧಿಪಡಿಸಿದ್ದು, ಭಾರತದಲ್ಲಿ ಇದನ್ನು ಸೀರಮ್ ಇನ್ಸ್ಟಿಟ್ಯೂಟ್ ತಯಾರಿಸಿದೆ.

ಕೇಂದ್ರ ಸರ್ಕಾರ ನಡೆಸುವ ಆರು ಆಸ್ಪತ್ರೆಗಳಿಗೆ ಭಾರತ್ ಬಯೋಟೆಕ್‌ನ ತಯಾರಿಕೆಯ ಕೊವಾಕ್ಸಿನ್ ನೀಡಲಾಗಿದ್ದು, ಇದು ಇನ್ನೂ ಪ್ರಾಯೋಗಿಕ ಹಂತದಲ್ಲಿದೆ. ಭಾರತೀಯ ಔಷಧ ನಿಯಂತ್ರಕವು ಈ ಲಸಿಕೆಗೆ ಅನುಮತಿ ನೀಡಿದಾಗ ಅದರ ಕ್ಲಿನಿಕಲ್ ಪ್ರಯೋಗ ನಡೆಯುತ್ತಿತ್ತು.

ದೆಹಲಿಯು ಮೊದಲ ದಿನ 8,117 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿತ್ತು, ಆದರೆ ನಗರದಾದ್ಯಂತ ಕಾರ್ಯನಿರ್ವಹಿಸುತ್ತಿದ್ದ 81 ತಾಣಗಳಲ್ಲಿ ಅರ್ಧದಷ್ಟು ಮಾತ್ರ ಲಸಿಕೆ ಹಾಕಲಾಯಿತು.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...