Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಶನಿವಾರ ದೇಶಾದ್ಯಂತ ಕೊರೊನಾ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಆದರೆ ಈ ವ್ಯಾಕ್ಸಿನೇಷನ್‌ನಿಂದ ದೆಹಲಿಯಲ್ಲಿ 51 ಸಣ್ಣಪುಟ್ಟ ಪ್ರತಿಕೂಲ ಪರಿಣಾಮ ಬೀರಿದ್ದು ವರದಿಯಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ. ಒಂದು ಗಂಭೀರ ಪ್ರಕರಣ ವರದಿಯಾಗಿದ್ದು, ಆ ರೋಗಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಯಲ್ಲಿ ದಾಖಲಿಸಲಾಗಿದೆ.

“ನಿನ್ನೆ ಒಂದು ದಿನದಲ್ಲಿ ಸಣ್ಣ ಪುಟ್ಟ 51 ಘಟನೆಗಳು ನಡೆದಿವೆ, ಅವುಗಳಲ್ಲಿ ಕೆಲವು ಸಣ್ಣಪುಟ್ಟ ತೊಂದರೆಗಳಾಗಿವೆ. ಒಂದು ಪ್ರಕರಣವಷ್ಟೇ ಸ್ವಲ್ಪ ಗಂಭೀರವಾಗಿದ್ದು, ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಕಳೆದ ರಾತ್ರಿಯವರೆಗೂ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು” ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

“ದೆಹಲಿಯಲ್ಲಿ ಕೇವಲ ಒಬ್ಬರನ್ನಷ್ಟೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಉಳಿದ 51 ಜನರನ್ನು ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿಲ್ಲ. ಅವರ ಮೇಲೆ ಸ್ವಲ್ಪ ಸಮಯದವರೆಗೆ ನಿಗಾ ವಹಿಸಲಾಯಿತು” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಏಮ್ಸ್‌ನಲ್ಲಿ ದಾಖಲಾದ ರೋಗಿಯು ಆಸ್ಪತ್ರೆಯಲ್ಲಿ ಕೆಲಸ ಮಾಡುವ 22 ವರ್ಷದ ಭದ್ರತಾ ಸಿಬ್ಬಂದಿಯಾಗಿದ್ದು, ನಿನ್ನೆ ರಾತ್ರಿಯವರೆಗೂ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಈಗ ಸ್ಥಿರವಾಗಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಮೊದಲ ದಿನ 4,000 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಏಮ್ಸ್‌ನಂತಹ ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಎಲ್ಲರಿಗೂ ಕೋವಿಶೀಲ್ಡ್ ನೀಡಲಾಗಿದೆ. ಇದನ್ನು ಆಕ್ಸ್‌ಫರ್ಡ್ ಯುನಿವರ್ಸಿಟಿಯು ಅಸ್ಟ್ರಾಜೆನೆಕಾ ಫಾರ್ಮಾ ಜೊತೆ ಅಭಿವೃದ್ಧಿಪಡಿಸಿದ್ದು, ಭಾರತದಲ್ಲಿ ಇದನ್ನು ಸೀರಮ್ ಇನ್ಸ್ಟಿಟ್ಯೂಟ್ ತಯಾರಿಸಿದೆ.

ಕೇಂದ್ರ ಸರ್ಕಾರ ನಡೆಸುವ ಆರು ಆಸ್ಪತ್ರೆಗಳಿಗೆ ಭಾರತ್ ಬಯೋಟೆಕ್‌ನ ತಯಾರಿಕೆಯ ಕೊವಾಕ್ಸಿನ್ ನೀಡಲಾಗಿದ್ದು, ಇದು ಇನ್ನೂ ಪ್ರಾಯೋಗಿಕ ಹಂತದಲ್ಲಿದೆ. ಭಾರತೀಯ ಔಷಧ ನಿಯಂತ್ರಕವು ಈ ಲಸಿಕೆಗೆ ಅನುಮತಿ ನೀಡಿದಾಗ ಅದರ ಕ್ಲಿನಿಕಲ್ ಪ್ರಯೋಗ ನಡೆಯುತ್ತಿತ್ತು.

ದೆಹಲಿಯು ಮೊದಲ ದಿನ 8,117 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿತ್ತು, ಆದರೆ ನಗರದಾದ್ಯಂತ ಕಾರ್ಯನಿರ್ವಹಿಸುತ್ತಿದ್ದ 81 ತಾಣಗಳಲ್ಲಿ ಅರ್ಧದಷ್ಟು ಮಾತ್ರ ಲಸಿಕೆ ಹಾಕಲಾಯಿತು.

ಇದನ್ನೂ ಓದಿ: ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...