Homeಕರೋನಾ ತಲ್ಲಣಕೊರೊನಾ ಲಸಿಕೆ: ಭಾರತದಲ್ಲಿ ಮುಂದಿನ ವಾರ ಅಸ್ಟ್ರಾಜೆನೆಕಾಗೆ ಅನುಮತಿ ಸಾಧ್ಯತೆ

ಕೊರೊನಾ ಲಸಿಕೆ: ಭಾರತದಲ್ಲಿ ಮುಂದಿನ ವಾರ ಅಸ್ಟ್ರಾಜೆನೆಕಾಗೆ ಅನುಮತಿ ಸಾಧ್ಯತೆ

ಭಾರತದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಲಸಿಕೆಯ ಅನುಮತಿಗಾಗಿ ಬಂದಿದ್ದ ಮೂರು ಅರ್ಜಿಯನ್ನು ಡಿಸೆಂಬರ್ 9 ರಂದು ಪರಿಶೀಲಿಸಿದೆ.

- Advertisement -
- Advertisement -

ಬ್ರಿಟನ್ ಮೂಲದ ಆಕ್ಸ್‌‌ಫರ್ಡ್ ತಯಾರಿಕೆಯ ಕೊರೊನಾ ವೈರಸ್ ಲಸಿಕೆ ಆಸ್ಟ್ರಾಜೆನೆಕಾದ ತುರ್ತು ಬಳಕೆಗೆ ಭಾರತವು ಮುಂದಿನ ವಾರದಲ್ಲಿ ಅನುಮತಿ ನೀಡಲಿದೆ ಎಂದು ಎರಡು ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ. ಈಗಾಗಲೇ ಔಷಧ ನಿಯಂತ್ರಕರಿಗೆ ಹೆಚ್ಚುವರಿ ಡೇಟಾವನ್ನು ಆಸ್ಟ್ರಾಜೆನೆಕಾದ ಸ್ಥಳೀಯ ತಯಾರಕರು ನೀಡಿದ್ದಾರೆ ಎನ್ನಲಾಗಿದೆ.

ಬ್ರಿಟನ್ ಔಷಧ ನಿಯಂತ್ರಕವು ಪ್ರಯೋಗದ ಡೇಟಾವನ್ನು ಇನ್ನೂ ಪರೀಕ್ಷಿಸುತ್ತಿದ್ದು, ಒಂದು ವೇಳೆ ಭಾರತವು ಈ ಲಸಿಕೆಗೆ ಅನುಮತಿ ನೀಡಿದರೆ ಭಾರತವು ಅಸ್ಟ್ರಾಜೆನೆಕಾಗೆ ಅನುಮತಿ ನೀಡಿದ ಮೊದಲ ರಾಷ್ಟ್ರವಾಗಲಿದೆ.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ತಯಾರಿಸುವ ದೇಶವಾದ ಭಾರತವು ಮುಂದಿನ ತಿಂಗಳು ತನ್ನ ನಾಗರಿಕರಿಗೆ ಚುಚ್ಚುಮದ್ದನ್ನು ನೀಡಲು ಬಯಸಿದ್ದು, ಈಗಾಗಲೇ ಫೈಝೆರ್ ಮತ್ತು ಸ್ಥಳೀಯ ಕಂಪನಿ ಭಾರತ್ ಬಯೋಟೆಕ್ ತಯಾರಿಸಿದ ಲಸಿಕೆಗಳಿಗೆ ತುರ್ತು ಬಳಕೆಯ ದೃಡೀಕರಣ ಅರ್ಜಿಗಳನ್ನು ಸಹ ಪರಿಗಣಿಸುತ್ತಿದೆ.

ವಿಶ್ವದಲ್ಲೆ ಅತೀ ಹೆಚ್ಚು ಸೋಂಕಿತರಿರುವ ದೇಶಗಳಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ. ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆಯು ಭಾರತದಂತಹ ಉಷ್ಣ ವಾತಾವರಣವಿರುವ ದೇಶಗಳಿಗೆ ಅತ್ಯಗತ್ಯವೆಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಅಗ್ಗವಾಗಿದ್ದು, ಸಾಗಿಸಲು ಕೂಡಾ ಸುಲಭವಾಗಿದೆ. ಅಲ್ಲದೆ ಇದನ್ನು ಸಾಮಾನ್ಯ ಫ್ರಿಜ್ ತಾಪಮಾನದಲ್ಲಿ ದೀರ್ಘಕಾಲದವರೆಗೆ ಸಂಗ್ರಹಿಸಬಹುದಾಗಿದೆ ಎನ್ನಲಾಗಿದೆ.

ಭಾರತದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಲಸಿಕೆಯ ಅನುಮತಿಗಾಗಿ ಬಂದಿದ್ದ ಮೂರು ಅರ್ಜಿಯನ್ನು ಡಿಸೆಂಬರ್ 9 ರಂದು ಪರಿಶೀಲಿಸಿದ್ದು, ಎಲ್ಲಾ ಕಂಪನಿಗಳಿಂದ ಹೆಚ್ಚಿನ ಮಾಹಿತಿ ಪಡೆದಿದೆ.

ಇದನ್ನೂ ಓದಿ: ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...