Homeಕರೋನಾ ತಲ್ಲಣಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

- Advertisement -
- Advertisement -

ಯೋಗ ಗುರು ರಾಮದೇವ್ ಅವರ ಕಂಪನಿ ಪತಂಜಲಿಯ ವಿವಾದಾತ್ಮಕ ‘ಆಯುರ್ವೇದ ಔಷಧಿ’ ಕೊರೊನಿಲ್‌ನ 1 ಲಕ್ಷ ಕಿಟ್‌ಗಳನ್ನು ಕೋವಿಡ್ ರೋಗಿಗಳಿಗೆ ಉಚಿತವಾಗಿ ನೀಡಲು ಹರಿಯಾಣದ ಬಿಜೆಪಿ ಸರ್ಕಾರ ನಿರ್ಧರಿಸಿದೆ.
ಸೋಮವಾರ ಸಂಜೆ ರಾಜ್ಯ ಸಚಿವ ಅನಿಲ್ ವಿಜ್ ಈ ನಿರ್ಧಾರವನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

“ಹರಿಯಾಣದ ಕೋವಿಡ್ ರೋಗಿಗಳಿಗೆ ಒಂದು ಲಕ್ಷ ಪತಂಜಲಿ ಕೊರೊನಿಲ್ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು. ಕೊರೊನಿಲ್ ವೆಚ್ಚದ ಅರ್ಧದಷ್ಟು ಭಾಗವನ್ನು ಪತಂಜಲಿ ಮತ್ತು ಅರ್ಧವನ್ನು ಹರಿಯಾಣ ಸರ್ಕಾರದ ಕೋವಿಡ್ ರಿಲೀಫ್ ಫಂಡ್ ಭರಿಸಲಿವೆ” ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಹರಿಯಾಣದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ರೈತರು ನಿರಂತರವಾಗಿ ಭಾಗವಹಿಸುವುತ್ತಿರುವುದೇ ಇದಕ್ಕೆ ಕಾರಣ ಎಂದು ರಾಜ್ಯದ ಬಿಜೆಪಿ ಸರ್ಕಾರವು ಹೇಳಿದೆ. ಇಂತಹ ಸಭೆಗಳು ಸೂಪರ್ ಸ್ಪ್ರೆಡರ್ ಘಟನೆಗಳಿಗೆ ಸಮನಾಗಿವೆ ಎಂದು ರಾಜ್ಯ ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಕೊರೊನಿಲ್ ಬಿಡುಗಡೆ ಸಮಾರಂಭದಲ್ಲಿ, “ಕೋವಿಡ್ ನಿರ್ಮೂಲನೆಗೆ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ರಾಮದೇವ್ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರ ಸಮ್ಮುಖದಲ್ಲೇ ಹೇಳಿದಾಗ ಅದು ವಿವಾದಕ್ಕೆ ಈಡಾಗಿತ್ತು.

ಭಾರತೀಯ ವೈದ್ಯಕೀಯ ಸಂಘವು ತೀವ್ರ ಟೀಕೆ ಮಾಡಿ, ಆರೋಗ್ಯ ಮಂತ್ರಿ ಸ್ವತಃ ವೈದ್ಯರಾಗಿ ದೇಶದ ಮುಂದೆ “ಸುಳ್ಳು, ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಹೇಗೆ ಉತ್ತೇಜಿಸಿದರು ಎಂದು ಪ್ರಶ್ನಿಸಿತ್ತು. ಔಷಧೀಯ ಉತ್ಪನ್ನದ ಪ್ರಮಾಣಪತ್ರ (coPP) ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ವಿಧಾನದ ಪ್ರಮಾಣಪತ್ರವನ್ನು ಕೊರೊನಿಲ್ ಹೊಂದಿದೆ ಎಂದು ರಾಮ್‌ದೇವ್ ಹೇಳಿಕೊಂಡಿದ್ದರು. (coPP – ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆ ನೀಡುತ್ತದೆ)

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಂತರದಲ್ಲಿ ರಾಮ್‌ದೇವ್, “ಅಂತರರಾಷ್ಟ್ರೀಯ ಮಾನದಂಡಗಳನ್ನು ಆಧರಿಸಿದ ಸಂಪೂರ್ಣ ವೈಜ್ಞಾನಿಕ ಸಂಶೋಧನಾ ಪುರಾವೆಗಳನ್ನು ಪೂರ್ಣಗೊಳಿಸಿದ ನಂತರ ಸರ್ಕಾರವು ಅನುಮತಿ ನೀಡಿದೆ. ದೇಶ ಮತ್ತು ಪ್ರಪಂಚವೂ ಸಹ ಒಪ್ಪಿಕೊಂಡಿವೆ WHO ಸಹ ಒಪ್ಪಿಕೊಂಡಿದೆ. ಈಗ ನಾವು `ಕೊರೊನಿಲ್’ ಅನ್ನು 150 ದೇಶಗಳಲ್ಲಿ ಮಾರಾಟ ಮಾಡುವ ಆಯ್ಕೆ ಹೊಂದಿದ್ದೇವೆ’ ಎಂದು ಹೇಳಿದ್ದರು.

ಆಗ್ನೇಯ ಏಷ್ಯಾದ WHO, ‘ಕೋವಿಡ್‌ಗೆ ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ’ ಎಂದು ಟ್ವೀಟ್ ಮಾಡಿದಾಗ, ರಾಮದೇವ್ ವಿರುದ್ಧ ಮತ್ತೆ ಟೀಕೆಗಳು ಕೇಳಿ ಬಂದಿದ್ದವು.

ರಾಮದೇವ್‌ರ “ಅಪ್ಪಟ ಸುಳ್ಳು” ಗಮನಿಸಿ ಆಘಾತವಾಯಿತು. ಈ ಕುರಿತಂತೆ ದೇಶಕ್ಕೆ ಆರೋಗ್ಯ ಸಚಿವರ ವಿವರಣೆಯ ಅಗತ್ಯವಿದೆ ಎಂದು ಐಎಂಎ ಪ್ರತಿಪಾದಿಸಿತ್ತು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...