Homeಕರೋನಾ ತಲ್ಲಣಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

- Advertisement -
- Advertisement -

ಯೋಗ ಗುರು ರಾಮದೇವ್ ಅವರ ಕಂಪನಿ ಪತಂಜಲಿಯ ವಿವಾದಾತ್ಮಕ ‘ಆಯುರ್ವೇದ ಔಷಧಿ’ ಕೊರೊನಿಲ್‌ನ 1 ಲಕ್ಷ ಕಿಟ್‌ಗಳನ್ನು ಕೋವಿಡ್ ರೋಗಿಗಳಿಗೆ ಉಚಿತವಾಗಿ ನೀಡಲು ಹರಿಯಾಣದ ಬಿಜೆಪಿ ಸರ್ಕಾರ ನಿರ್ಧರಿಸಿದೆ.
ಸೋಮವಾರ ಸಂಜೆ ರಾಜ್ಯ ಸಚಿವ ಅನಿಲ್ ವಿಜ್ ಈ ನಿರ್ಧಾರವನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

“ಹರಿಯಾಣದ ಕೋವಿಡ್ ರೋಗಿಗಳಿಗೆ ಒಂದು ಲಕ್ಷ ಪತಂಜಲಿ ಕೊರೊನಿಲ್ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು. ಕೊರೊನಿಲ್ ವೆಚ್ಚದ ಅರ್ಧದಷ್ಟು ಭಾಗವನ್ನು ಪತಂಜಲಿ ಮತ್ತು ಅರ್ಧವನ್ನು ಹರಿಯಾಣ ಸರ್ಕಾರದ ಕೋವಿಡ್ ರಿಲೀಫ್ ಫಂಡ್ ಭರಿಸಲಿವೆ” ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಹರಿಯಾಣದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ರೈತರು ನಿರಂತರವಾಗಿ ಭಾಗವಹಿಸುವುತ್ತಿರುವುದೇ ಇದಕ್ಕೆ ಕಾರಣ ಎಂದು ರಾಜ್ಯದ ಬಿಜೆಪಿ ಸರ್ಕಾರವು ಹೇಳಿದೆ. ಇಂತಹ ಸಭೆಗಳು ಸೂಪರ್ ಸ್ಪ್ರೆಡರ್ ಘಟನೆಗಳಿಗೆ ಸಮನಾಗಿವೆ ಎಂದು ರಾಜ್ಯ ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಕೊರೊನಿಲ್ ಬಿಡುಗಡೆ ಸಮಾರಂಭದಲ್ಲಿ, “ಕೋವಿಡ್ ನಿರ್ಮೂಲನೆಗೆ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ರಾಮದೇವ್ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರ ಸಮ್ಮುಖದಲ್ಲೇ ಹೇಳಿದಾಗ ಅದು ವಿವಾದಕ್ಕೆ ಈಡಾಗಿತ್ತು.

ಭಾರತೀಯ ವೈದ್ಯಕೀಯ ಸಂಘವು ತೀವ್ರ ಟೀಕೆ ಮಾಡಿ, ಆರೋಗ್ಯ ಮಂತ್ರಿ ಸ್ವತಃ ವೈದ್ಯರಾಗಿ ದೇಶದ ಮುಂದೆ “ಸುಳ್ಳು, ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಹೇಗೆ ಉತ್ತೇಜಿಸಿದರು ಎಂದು ಪ್ರಶ್ನಿಸಿತ್ತು. ಔಷಧೀಯ ಉತ್ಪನ್ನದ ಪ್ರಮಾಣಪತ್ರ (coPP) ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ವಿಧಾನದ ಪ್ರಮಾಣಪತ್ರವನ್ನು ಕೊರೊನಿಲ್ ಹೊಂದಿದೆ ಎಂದು ರಾಮ್‌ದೇವ್ ಹೇಳಿಕೊಂಡಿದ್ದರು. (coPP – ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆ ನೀಡುತ್ತದೆ)

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಂತರದಲ್ಲಿ ರಾಮ್‌ದೇವ್, “ಅಂತರರಾಷ್ಟ್ರೀಯ ಮಾನದಂಡಗಳನ್ನು ಆಧರಿಸಿದ ಸಂಪೂರ್ಣ ವೈಜ್ಞಾನಿಕ ಸಂಶೋಧನಾ ಪುರಾವೆಗಳನ್ನು ಪೂರ್ಣಗೊಳಿಸಿದ ನಂತರ ಸರ್ಕಾರವು ಅನುಮತಿ ನೀಡಿದೆ. ದೇಶ ಮತ್ತು ಪ್ರಪಂಚವೂ ಸಹ ಒಪ್ಪಿಕೊಂಡಿವೆ WHO ಸಹ ಒಪ್ಪಿಕೊಂಡಿದೆ. ಈಗ ನಾವು `ಕೊರೊನಿಲ್’ ಅನ್ನು 150 ದೇಶಗಳಲ್ಲಿ ಮಾರಾಟ ಮಾಡುವ ಆಯ್ಕೆ ಹೊಂದಿದ್ದೇವೆ’ ಎಂದು ಹೇಳಿದ್ದರು.

ಆಗ್ನೇಯ ಏಷ್ಯಾದ WHO, ‘ಕೋವಿಡ್‌ಗೆ ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ’ ಎಂದು ಟ್ವೀಟ್ ಮಾಡಿದಾಗ, ರಾಮದೇವ್ ವಿರುದ್ಧ ಮತ್ತೆ ಟೀಕೆಗಳು ಕೇಳಿ ಬಂದಿದ್ದವು.

ರಾಮದೇವ್‌ರ “ಅಪ್ಪಟ ಸುಳ್ಳು” ಗಮನಿಸಿ ಆಘಾತವಾಯಿತು. ಈ ಕುರಿತಂತೆ ದೇಶಕ್ಕೆ ಆರೋಗ್ಯ ಸಚಿವರ ವಿವರಣೆಯ ಅಗತ್ಯವಿದೆ ಎಂದು ಐಎಂಎ ಪ್ರತಿಪಾದಿಸಿತ್ತು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...