Homeಕರೋನಾ ತಲ್ಲಣಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

- Advertisement -
- Advertisement -

ಯೋಗ ಗುರು ರಾಮದೇವ್ ಅವರ ಕಂಪನಿ ಪತಂಜಲಿಯ ವಿವಾದಾತ್ಮಕ ‘ಆಯುರ್ವೇದ ಔಷಧಿ’ ಕೊರೊನಿಲ್‌ನ 1 ಲಕ್ಷ ಕಿಟ್‌ಗಳನ್ನು ಕೋವಿಡ್ ರೋಗಿಗಳಿಗೆ ಉಚಿತವಾಗಿ ನೀಡಲು ಹರಿಯಾಣದ ಬಿಜೆಪಿ ಸರ್ಕಾರ ನಿರ್ಧರಿಸಿದೆ.
ಸೋಮವಾರ ಸಂಜೆ ರಾಜ್ಯ ಸಚಿವ ಅನಿಲ್ ವಿಜ್ ಈ ನಿರ್ಧಾರವನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

“ಹರಿಯಾಣದ ಕೋವಿಡ್ ರೋಗಿಗಳಿಗೆ ಒಂದು ಲಕ್ಷ ಪತಂಜಲಿ ಕೊರೊನಿಲ್ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು. ಕೊರೊನಿಲ್ ವೆಚ್ಚದ ಅರ್ಧದಷ್ಟು ಭಾಗವನ್ನು ಪತಂಜಲಿ ಮತ್ತು ಅರ್ಧವನ್ನು ಹರಿಯಾಣ ಸರ್ಕಾರದ ಕೋವಿಡ್ ರಿಲೀಫ್ ಫಂಡ್ ಭರಿಸಲಿವೆ” ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಹರಿಯಾಣದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ರೈತರು ನಿರಂತರವಾಗಿ ಭಾಗವಹಿಸುವುತ್ತಿರುವುದೇ ಇದಕ್ಕೆ ಕಾರಣ ಎಂದು ರಾಜ್ಯದ ಬಿಜೆಪಿ ಸರ್ಕಾರವು ಹೇಳಿದೆ. ಇಂತಹ ಸಭೆಗಳು ಸೂಪರ್ ಸ್ಪ್ರೆಡರ್ ಘಟನೆಗಳಿಗೆ ಸಮನಾಗಿವೆ ಎಂದು ರಾಜ್ಯ ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಕೊರೊನಿಲ್ ಬಿಡುಗಡೆ ಸಮಾರಂಭದಲ್ಲಿ, “ಕೋವಿಡ್ ನಿರ್ಮೂಲನೆಗೆ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ರಾಮದೇವ್ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರ ಸಮ್ಮುಖದಲ್ಲೇ ಹೇಳಿದಾಗ ಅದು ವಿವಾದಕ್ಕೆ ಈಡಾಗಿತ್ತು.

ಭಾರತೀಯ ವೈದ್ಯಕೀಯ ಸಂಘವು ತೀವ್ರ ಟೀಕೆ ಮಾಡಿ, ಆರೋಗ್ಯ ಮಂತ್ರಿ ಸ್ವತಃ ವೈದ್ಯರಾಗಿ ದೇಶದ ಮುಂದೆ “ಸುಳ್ಳು, ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಹೇಗೆ ಉತ್ತೇಜಿಸಿದರು ಎಂದು ಪ್ರಶ್ನಿಸಿತ್ತು. ಔಷಧೀಯ ಉತ್ಪನ್ನದ ಪ್ರಮಾಣಪತ್ರ (coPP) ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ವಿಧಾನದ ಪ್ರಮಾಣಪತ್ರವನ್ನು ಕೊರೊನಿಲ್ ಹೊಂದಿದೆ ಎಂದು ರಾಮ್‌ದೇವ್ ಹೇಳಿಕೊಂಡಿದ್ದರು. (coPP – ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆ ನೀಡುತ್ತದೆ)

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಂತರದಲ್ಲಿ ರಾಮ್‌ದೇವ್, “ಅಂತರರಾಷ್ಟ್ರೀಯ ಮಾನದಂಡಗಳನ್ನು ಆಧರಿಸಿದ ಸಂಪೂರ್ಣ ವೈಜ್ಞಾನಿಕ ಸಂಶೋಧನಾ ಪುರಾವೆಗಳನ್ನು ಪೂರ್ಣಗೊಳಿಸಿದ ನಂತರ ಸರ್ಕಾರವು ಅನುಮತಿ ನೀಡಿದೆ. ದೇಶ ಮತ್ತು ಪ್ರಪಂಚವೂ ಸಹ ಒಪ್ಪಿಕೊಂಡಿವೆ WHO ಸಹ ಒಪ್ಪಿಕೊಂಡಿದೆ. ಈಗ ನಾವು `ಕೊರೊನಿಲ್’ ಅನ್ನು 150 ದೇಶಗಳಲ್ಲಿ ಮಾರಾಟ ಮಾಡುವ ಆಯ್ಕೆ ಹೊಂದಿದ್ದೇವೆ’ ಎಂದು ಹೇಳಿದ್ದರು.

ಆಗ್ನೇಯ ಏಷ್ಯಾದ WHO, ‘ಕೋವಿಡ್‌ಗೆ ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ’ ಎಂದು ಟ್ವೀಟ್ ಮಾಡಿದಾಗ, ರಾಮದೇವ್ ವಿರುದ್ಧ ಮತ್ತೆ ಟೀಕೆಗಳು ಕೇಳಿ ಬಂದಿದ್ದವು.

ರಾಮದೇವ್‌ರ “ಅಪ್ಪಟ ಸುಳ್ಳು” ಗಮನಿಸಿ ಆಘಾತವಾಯಿತು. ಈ ಕುರಿತಂತೆ ದೇಶಕ್ಕೆ ಆರೋಗ್ಯ ಸಚಿವರ ವಿವರಣೆಯ ಅಗತ್ಯವಿದೆ ಎಂದು ಐಎಂಎ ಪ್ರತಿಪಾದಿಸಿತ್ತು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....