Homeಕರೋನಾ ತಲ್ಲಣಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

- Advertisement -
- Advertisement -

ಯೋಗ ಗುರು ರಾಮದೇವ್ ಅವರ ಕಂಪನಿ ಪತಂಜಲಿಯ ವಿವಾದಾತ್ಮಕ ‘ಆಯುರ್ವೇದ ಔಷಧಿ’ ಕೊರೊನಿಲ್‌ನ 1 ಲಕ್ಷ ಕಿಟ್‌ಗಳನ್ನು ಕೋವಿಡ್ ರೋಗಿಗಳಿಗೆ ಉಚಿತವಾಗಿ ನೀಡಲು ಹರಿಯಾಣದ ಬಿಜೆಪಿ ಸರ್ಕಾರ ನಿರ್ಧರಿಸಿದೆ.
ಸೋಮವಾರ ಸಂಜೆ ರಾಜ್ಯ ಸಚಿವ ಅನಿಲ್ ವಿಜ್ ಈ ನಿರ್ಧಾರವನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

“ಹರಿಯಾಣದ ಕೋವಿಡ್ ರೋಗಿಗಳಿಗೆ ಒಂದು ಲಕ್ಷ ಪತಂಜಲಿ ಕೊರೊನಿಲ್ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು. ಕೊರೊನಿಲ್ ವೆಚ್ಚದ ಅರ್ಧದಷ್ಟು ಭಾಗವನ್ನು ಪತಂಜಲಿ ಮತ್ತು ಅರ್ಧವನ್ನು ಹರಿಯಾಣ ಸರ್ಕಾರದ ಕೋವಿಡ್ ರಿಲೀಫ್ ಫಂಡ್ ಭರಿಸಲಿವೆ” ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಹರಿಯಾಣದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯಲ್ಲಿ ರೈತರು ನಿರಂತರವಾಗಿ ಭಾಗವಹಿಸುವುತ್ತಿರುವುದೇ ಇದಕ್ಕೆ ಕಾರಣ ಎಂದು ರಾಜ್ಯದ ಬಿಜೆಪಿ ಸರ್ಕಾರವು ಹೇಳಿದೆ. ಇಂತಹ ಸಭೆಗಳು ಸೂಪರ್ ಸ್ಪ್ರೆಡರ್ ಘಟನೆಗಳಿಗೆ ಸಮನಾಗಿವೆ ಎಂದು ರಾಜ್ಯ ಅಧಿಕಾರಿಗಳು ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಕೊರೊನಿಲ್ ಬಿಡುಗಡೆ ಸಮಾರಂಭದಲ್ಲಿ, “ಕೋವಿಡ್ ನಿರ್ಮೂಲನೆಗೆ ಮೊದಲ ಸಾಕ್ಷ್ಯ ಆಧಾರಿತ ಔಷಧ” ಎಂದು ರಾಮದೇವ್ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರ ಸಮ್ಮುಖದಲ್ಲೇ ಹೇಳಿದಾಗ ಅದು ವಿವಾದಕ್ಕೆ ಈಡಾಗಿತ್ತು.

ಭಾರತೀಯ ವೈದ್ಯಕೀಯ ಸಂಘವು ತೀವ್ರ ಟೀಕೆ ಮಾಡಿ, ಆರೋಗ್ಯ ಮಂತ್ರಿ ಸ್ವತಃ ವೈದ್ಯರಾಗಿ ದೇಶದ ಮುಂದೆ “ಸುಳ್ಳು, ಕಟ್ಟುಕಥೆ, ಅವೈಜ್ಞಾನಿಕ ಉತ್ಪನ್ನ”ವನ್ನು ಹೇಗೆ ಉತ್ತೇಜಿಸಿದರು ಎಂದು ಪ್ರಶ್ನಿಸಿತ್ತು. ಔಷಧೀಯ ಉತ್ಪನ್ನದ ಪ್ರಮಾಣಪತ್ರ (coPP) ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ವಿಧಾನದ ಪ್ರಮಾಣಪತ್ರವನ್ನು ಕೊರೊನಿಲ್ ಹೊಂದಿದೆ ಎಂದು ರಾಮ್‌ದೇವ್ ಹೇಳಿಕೊಂಡಿದ್ದರು. (coPP – ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆ ನೀಡುತ್ತದೆ)

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಂತರದಲ್ಲಿ ರಾಮ್‌ದೇವ್, “ಅಂತರರಾಷ್ಟ್ರೀಯ ಮಾನದಂಡಗಳನ್ನು ಆಧರಿಸಿದ ಸಂಪೂರ್ಣ ವೈಜ್ಞಾನಿಕ ಸಂಶೋಧನಾ ಪುರಾವೆಗಳನ್ನು ಪೂರ್ಣಗೊಳಿಸಿದ ನಂತರ ಸರ್ಕಾರವು ಅನುಮತಿ ನೀಡಿದೆ. ದೇಶ ಮತ್ತು ಪ್ರಪಂಚವೂ ಸಹ ಒಪ್ಪಿಕೊಂಡಿವೆ WHO ಸಹ ಒಪ್ಪಿಕೊಂಡಿದೆ. ಈಗ ನಾವು `ಕೊರೊನಿಲ್’ ಅನ್ನು 150 ದೇಶಗಳಲ್ಲಿ ಮಾರಾಟ ಮಾಡುವ ಆಯ್ಕೆ ಹೊಂದಿದ್ದೇವೆ’ ಎಂದು ಹೇಳಿದ್ದರು.

ಆಗ್ನೇಯ ಏಷ್ಯಾದ WHO, ‘ಕೋವಿಡ್‌ಗೆ ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ’ ಎಂದು ಟ್ವೀಟ್ ಮಾಡಿದಾಗ, ರಾಮದೇವ್ ವಿರುದ್ಧ ಮತ್ತೆ ಟೀಕೆಗಳು ಕೇಳಿ ಬಂದಿದ್ದವು.

ರಾಮದೇವ್‌ರ “ಅಪ್ಪಟ ಸುಳ್ಳು” ಗಮನಿಸಿ ಆಘಾತವಾಯಿತು. ಈ ಕುರಿತಂತೆ ದೇಶಕ್ಕೆ ಆರೋಗ್ಯ ಸಚಿವರ ವಿವರಣೆಯ ಅಗತ್ಯವಿದೆ ಎಂದು ಐಎಂಎ ಪ್ರತಿಪಾದಿಸಿತ್ತು.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...