Homeಮುಖಪುಟಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಕೇಂದ್ರದಲ್ಲಿ ಅಧಿಕಾರದಲ್ಲಿಲ್ಲದ ವರ್ಷದಲ್ಲಿ ಸಹ ಕಾರ್ಪೊರೇಟ್ ದೇಣಿಗೆಗಳನ್ನು ಆಕರ್ಷಿಸುವಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂಲೂ ಮುಂದಿದೆ ಎಂದು ವರದಿ ಹೇಳಿದೆ.

- Advertisement -
- Advertisement -

2012-13 ಮತ್ತು 2018-19 ರ ನಡುವೆ ಏಳು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ನೀಡಲಾದ 2,818.05 ಕೋಟಿ ರೂ. ಕಾರ್ಪೋರೇಟ್ ದೇಣೀಗೆಗಳಲ್ಲಿ 82.3% ( 2,319.48 ಕೋಟಿ ರೂ) ಹಣವನ್ನು ಬಿಜೆಪಿ ಪಕ್ಷವೊಂದೆ ಪಡೆದಿದೆ.

ಇದಕ್ಕೆ ವ್ಯತಿರಿಕ್ತವಾಗಿ ಈ ಏಳು ವರ್ಷಗಳಲ್ಲಿ ಕಾಂಗ್ರೆಸ್ 376.02 ಕೋಟಿ ರೂ.ಗಳನ್ನು ಪಡೆದಿದ್ದರೆ, ಇತರ ರಾಷ್ಟ್ರೀಯ ಪಕ್ಷಗಳಾದ ಎನ್‌ಸಿಪಿ 69.81 ಕೋಟಿ ರೂ., ತೃಣಮೂಲ ಕಾಂಗ್ರೆಸ್ 45.01 ಕೋಟಿ ರೂ., ಸಿಪಿಐ-ಎಂ 7.5 ಕೋಟಿ ರೂ. ಮತ್ತು ಸಿಪಿಐ 22 ಲಕ್ಷ ರೂ ಪಡೆದಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಮತ್ತೊಂದು ರಾಷ್ಟ್ರೀಯ ಪಕ್ಷವಾದ ಬಿಎಸ್ಪಿ 20,000 ರೂ.ಗಿಂತ ಹೆಚ್ಚಿನ ದೇಣಿಗೆಯನ್ನು ಸ್ವೀಕರಿಸಿಲ್ಲ ಎಂದು ಘೋಷಿಸಿದೆ. ತೃಣಮೂಲ ಕಾಂಗ್ರೆಸ್‌ಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು 2 ಸೆಪ್ಟೆಂಬರ್, 2016 ರಂದು ನೀಡಲಾಗಿತ್ತು.

ಖಾಸಗಿ ಚುನಾವಣಾ ವಾಚ್‌ಡಾಗ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯು ಕೇಂದ್ರದಲ್ಲಿ ಅಧಿಕಾರದಲ್ಲಿಲ್ಲದ ವರ್ಷದಲ್ಲಿ ಸಹ ಕಾರ್ಪೊರೇಟ್ ದೇಣಿಗೆಗಳನ್ನು ಆಕರ್ಷಿಸುವಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂಲೂ ಮುಂದಿದೆ ಎಂದು ಹೇಳಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದ 2012-13 ರ ಸಮಯದಲ್ಲಿ ಬಿಜೆಪಿಗೆ 72.99 ಕೋಟಿ ರೂ. ಪಡೆದಿದ್ದು, ಮುಂದಿನ ಹಣಕಾಸು ವರ್ಷದಲ್ಲಿ ಇದು 156.98 ಕೋಟಿ ರೂ.ಗೆ ಏರಿತ್ತು. ಇದಕ್ಕೆ ಹೋಲಿಸಿದರೆ 2012-13 ರಲ್ಲಿ ಕಾಂಗ್ರೆಸ್‌ಗೆ ಕೇವಲ 7.54 ಕೋಟಿ ರೂ. ದೊರೆತಿದ್ದು, ಇದು ಬಿಜೆಪಿಗೆ ದೊರೆತ ಹತ್ತನೇ ಒಂದು ಭಾಗದಷ್ಟಾಗಿದೆ. 2013-14 ರಲ್ಲಿ ಕಾಂಗ್ರೆಸ್ 53.51 ಕೋಟಿ ರೂ. ಪಡೆದಿದ್ದು ಇದು ಬಿಜೆಪಿ ಪಡೆದ ಮೂರನೇ ಒಂದು ಭಾಗದಷ್ಟಾಗಿದೆ.

ಸಿಪಿಐ ಯಾವುದೇ ಕಾರ್ಪೊರೇಟ್‌ ಕಂಪೆನಿಗಳಿಂದ ದೇಣಿಗೆ ಸ್ವೀಕರಿಸಿಲ್ಲ ಎಂದು ವರದಿ ಮಾಡಿದರೆ, ಬಿಎಸ್ಪಿ 20,000 ರೂ.ಗಿಂತ ಹೆಚ್ಚಿನ ದೇಣಿಗೆಯನ್ನು ಸ್ವೀಕರಿಸಿಲ್ಲ ಎಂದು ಹೇಳಿದೆ. ಕಾರ್ಪೊರೇಟ್‌ಗಳಿಂದ ರಾಷ್ಟ್ರೀಯ ಪಕ್ಷಗಳಿಗೆ ನೀಡುವ ದೇಣಿಗೆ 2004-12 ರಿಂದ 2018-19ರ ಅವಧಿಯಲ್ಲಿ 131% ಹೆಚ್ಚಾಗಿದೆ.

ಕಳೆದ ಹಣಕಾಸು ವರ್ಷದಲ್ಲಿ ಒಟ್ಟು 742.15 ಕೋಟಿ ರೂ. ದೇಣಿಗೆ ಬಂದಿದ್ದು, ಬಿಜೆಪಿಯೊಂದಕ್ಕೆ 1,573 ಕಾರ್ಪೋರೇಟ್‌ಗಳಿಂದ 698.08 ಕೋಟಿ ರೂ. ದೇಣಿಗೆ ಹರಿದು ಬಂದಿದೆ. ಕಾಂಗ್ರೆಸ್‌ಗೆ 122 ದಾನಿಗಳಿಂದ 122.5 ಕೋಟಿ ರೂ. ಬಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...