Homeಮುಖಪುಟಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಕಾರ್ಪೋರೇಟ್‌ಗಳ ಮುದ್ದಿನ ಪಕ್ಷ; 7 ವರ್ಷಗಳಲ್ಲಿ ಅತೀ ಹೆಚ್ಚು ದೇಣಿಗೆ ಪಡೆದ BJP

ಕೇಂದ್ರದಲ್ಲಿ ಅಧಿಕಾರದಲ್ಲಿಲ್ಲದ ವರ್ಷದಲ್ಲಿ ಸಹ ಕಾರ್ಪೊರೇಟ್ ದೇಣಿಗೆಗಳನ್ನು ಆಕರ್ಷಿಸುವಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂಲೂ ಮುಂದಿದೆ ಎಂದು ವರದಿ ಹೇಳಿದೆ.

- Advertisement -
- Advertisement -

2012-13 ಮತ್ತು 2018-19 ರ ನಡುವೆ ಏಳು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ನೀಡಲಾದ 2,818.05 ಕೋಟಿ ರೂ. ಕಾರ್ಪೋರೇಟ್ ದೇಣೀಗೆಗಳಲ್ಲಿ 82.3% ( 2,319.48 ಕೋಟಿ ರೂ) ಹಣವನ್ನು ಬಿಜೆಪಿ ಪಕ್ಷವೊಂದೆ ಪಡೆದಿದೆ.

ಇದಕ್ಕೆ ವ್ಯತಿರಿಕ್ತವಾಗಿ ಈ ಏಳು ವರ್ಷಗಳಲ್ಲಿ ಕಾಂಗ್ರೆಸ್ 376.02 ಕೋಟಿ ರೂ.ಗಳನ್ನು ಪಡೆದಿದ್ದರೆ, ಇತರ ರಾಷ್ಟ್ರೀಯ ಪಕ್ಷಗಳಾದ ಎನ್‌ಸಿಪಿ 69.81 ಕೋಟಿ ರೂ., ತೃಣಮೂಲ ಕಾಂಗ್ರೆಸ್ 45.01 ಕೋಟಿ ರೂ., ಸಿಪಿಐ-ಎಂ 7.5 ಕೋಟಿ ರೂ. ಮತ್ತು ಸಿಪಿಐ 22 ಲಕ್ಷ ರೂ ಪಡೆದಿದೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 743 ಕೋಟಿ ಪಾರ್ಟಿ ಫಂಡ್‌ ಪಡೆದ ಬಿಜೆಪಿ: ಇತರ ಪಕ್ಷಗಳಿಗಿಂತ ಮೂರು ಪಟ್ಟು ಹೆಚ್ಚು!

ಮತ್ತೊಂದು ರಾಷ್ಟ್ರೀಯ ಪಕ್ಷವಾದ ಬಿಎಸ್ಪಿ 20,000 ರೂ.ಗಿಂತ ಹೆಚ್ಚಿನ ದೇಣಿಗೆಯನ್ನು ಸ್ವೀಕರಿಸಿಲ್ಲ ಎಂದು ಘೋಷಿಸಿದೆ. ತೃಣಮೂಲ ಕಾಂಗ್ರೆಸ್‌ಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು 2 ಸೆಪ್ಟೆಂಬರ್, 2016 ರಂದು ನೀಡಲಾಗಿತ್ತು.

ಖಾಸಗಿ ಚುನಾವಣಾ ವಾಚ್‌ಡಾಗ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯು ಕೇಂದ್ರದಲ್ಲಿ ಅಧಿಕಾರದಲ್ಲಿಲ್ಲದ ವರ್ಷದಲ್ಲಿ ಸಹ ಕಾರ್ಪೊರೇಟ್ ದೇಣಿಗೆಗಳನ್ನು ಆಕರ್ಷಿಸುವಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂಲೂ ಮುಂದಿದೆ ಎಂದು ಹೇಳಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದ 2012-13 ರ ಸಮಯದಲ್ಲಿ ಬಿಜೆಪಿಗೆ 72.99 ಕೋಟಿ ರೂ. ಪಡೆದಿದ್ದು, ಮುಂದಿನ ಹಣಕಾಸು ವರ್ಷದಲ್ಲಿ ಇದು 156.98 ಕೋಟಿ ರೂ.ಗೆ ಏರಿತ್ತು. ಇದಕ್ಕೆ ಹೋಲಿಸಿದರೆ 2012-13 ರಲ್ಲಿ ಕಾಂಗ್ರೆಸ್‌ಗೆ ಕೇವಲ 7.54 ಕೋಟಿ ರೂ. ದೊರೆತಿದ್ದು, ಇದು ಬಿಜೆಪಿಗೆ ದೊರೆತ ಹತ್ತನೇ ಒಂದು ಭಾಗದಷ್ಟಾಗಿದೆ. 2013-14 ರಲ್ಲಿ ಕಾಂಗ್ರೆಸ್ 53.51 ಕೋಟಿ ರೂ. ಪಡೆದಿದ್ದು ಇದು ಬಿಜೆಪಿ ಪಡೆದ ಮೂರನೇ ಒಂದು ಭಾಗದಷ್ಟಾಗಿದೆ.

ಸಿಪಿಐ ಯಾವುದೇ ಕಾರ್ಪೊರೇಟ್‌ ಕಂಪೆನಿಗಳಿಂದ ದೇಣಿಗೆ ಸ್ವೀಕರಿಸಿಲ್ಲ ಎಂದು ವರದಿ ಮಾಡಿದರೆ, ಬಿಎಸ್ಪಿ 20,000 ರೂ.ಗಿಂತ ಹೆಚ್ಚಿನ ದೇಣಿಗೆಯನ್ನು ಸ್ವೀಕರಿಸಿಲ್ಲ ಎಂದು ಹೇಳಿದೆ. ಕಾರ್ಪೊರೇಟ್‌ಗಳಿಂದ ರಾಷ್ಟ್ರೀಯ ಪಕ್ಷಗಳಿಗೆ ನೀಡುವ ದೇಣಿಗೆ 2004-12 ರಿಂದ 2018-19ರ ಅವಧಿಯಲ್ಲಿ 131% ಹೆಚ್ಚಾಗಿದೆ.

ಕಳೆದ ಹಣಕಾಸು ವರ್ಷದಲ್ಲಿ ಒಟ್ಟು 742.15 ಕೋಟಿ ರೂ. ದೇಣಿಗೆ ಬಂದಿದ್ದು, ಬಿಜೆಪಿಯೊಂದಕ್ಕೆ 1,573 ಕಾರ್ಪೋರೇಟ್‌ಗಳಿಂದ 698.08 ಕೋಟಿ ರೂ. ದೇಣಿಗೆ ಹರಿದು ಬಂದಿದೆ. ಕಾಂಗ್ರೆಸ್‌ಗೆ 122 ದಾನಿಗಳಿಂದ 122.5 ಕೋಟಿ ರೂ. ಬಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...