Homeಮುಖಪುಟಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

ಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 22 ವರ್ಷದ ಪತ್ರಕರ್ತ ಮತ್ತು ಆರ್‌ಟಿಐ ಕಾರ್ಯಕರ್ತನ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಬಿಹಾರದ ಮಧುಬನಿ ಜಿಲ್ಲೆಯ ಹಳ್ಳಿಯೊಂದರ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.

ಸಾವನ್ನಪ್ಪಿರುವ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ, ಸ್ಥಳೀಯ ಸುದ್ದಿ ವೆಬ್‌ಸೈಟ್‌ನಲ್ಲಿ ಪರ್ತಕರ್ತರಾಗಿದ್ದರು.

ಆರ್‌ಟಿಐ ಕಾರ್ಯಕರ್ತರು ಆಗಿದ್ದ ಬುದ್ದಿನಾಥ್‌, ನಕಲಿ ಕ್ಲಿನಿಕ್‌ಗಳ ಕುರಿತು ಸರಣಿ ವರದಿ ಮಾಡಿದ್ದರು. ಕ್ಲಿನಿಕ್‌ಗಳ ಬಗ್ಗೆ ಸುದ್ದಿ ಮಾಡದಂತೆ ಅವರಿಗೆ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದವು ಹಾಗೂ ಲಂಚ ನೀಡುವುದಾಗಿ ಆಮಿಷ ಒಡ್ಡಿದ್ದರು. ಇವೆಲ್ಲವನ್ನು ತಿರಸ್ಕರಿಸಿದ್ದ ಅವರು ಕ್ಲಿನಿಕ್‌ಗಳ ಬಗ್ಗೆ ವಸ್ತುನಿಷ್ಠವಾದ ವರದಿಗಳನ್ನು ಮಾಡಿದ್ದರು. ಅವರು ಕಾಣೆಯಾಗುವ ಮೊದಲು ಕೂಡ ಫೇಸ್‌ಬುಕ್‌ನಲ್ಲಿ ಅಲ್ಲಿನ ಸ್ಥಳೀಯ ಎರಡು ಕ್ಲಿನಿಕ್‌ಗಳು ‘ನಕಲಿ’ ಎಂದು ಆರೋಪಿಸಿ ಪೋಸ್ಟ್‌ ಒಂದನ್ನು ಅಪ್‌ಲೋಡ್‌ ಮಾಡಿದ್ದರು. ಇದಾದ ಎರಡು ದಿನಗಳ ನಂತರ ಅವರು ಕಣ್ಮರೆಯಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ.

‘ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ ಎಂದಿರುವ ಅವರ ಕುಟುಂಬದವರು, ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆನಿಪಟ್ಟಿಯಿಂದ ಪಶ್ಚಿಮಕ್ಕೆ ಸುಮಾರು 5 ಕಿ.ಮೀ ದೂರದಲ್ಲಿರುವ ಬೇಟೌನ್ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ಬುದ್ದಿನಾಥ್‌ ಅವರ ಫೋನ್‌ ಸ್ವಿಚ್ ಆನ್ ಮಾಡಿರುವುದು ಪತ್ತೆಯಾಗಿದೆ. ಮೊಬೈಲ್‌ ಟ್ಯ್ರಾಕ್‌ ಮಾಡುತ್ತಿದ್ದ ಪೊಲೀಸರು ಆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಯಾವುದೇ ಸುಳಿವು ಸಿಗದೇ ಹಿಂದಿರುಗಿದ್ದರು.

ಶುಕ್ರವಾರ, ನವೆಂಬರ್ 12 ರಂದು, ಬುದ್ದಿನಾಥ್ ಅವರ ಸೋದರ ಸಂಬಂಧಿ ಬೆಟೌನ್ ಗ್ರಾಮದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದೆ ಎಂದು ಮಾಹಿತಿ ಪಡೆದರು. ಕೆಲ ಸಂಬಂಧಿಕರು ಮತ್ತು ಅಧಿಕಾರಿಗಳು ಅಲ್ಲಿಗೆ ಧಾವಿಸಿದ್ದು, ಬೆರಳಿನಲ್ಲಿದ್ದ ಉಂಗುರ, ಕಾಲಿನ ಗುರುತು ಹಾಗೂ ಕುತ್ತಿಗೆಯಲ್ಲಿದ್ದ ಸರದಿಂದಾಗಿ ಬುದ್ಧಿನಾಥನ ಶವ ಗುರುತಿಸಿದ್ದಾರೆ.

ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶವವನ್ನು ತಕ್ಷಣ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಇದನ್ನೂ ಓದಿ: ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...