Homeಮುಖಪುಟಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

ಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 22 ವರ್ಷದ ಪತ್ರಕರ್ತ ಮತ್ತು ಆರ್‌ಟಿಐ ಕಾರ್ಯಕರ್ತನ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಬಿಹಾರದ ಮಧುಬನಿ ಜಿಲ್ಲೆಯ ಹಳ್ಳಿಯೊಂದರ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.

ಸಾವನ್ನಪ್ಪಿರುವ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ, ಸ್ಥಳೀಯ ಸುದ್ದಿ ವೆಬ್‌ಸೈಟ್‌ನಲ್ಲಿ ಪರ್ತಕರ್ತರಾಗಿದ್ದರು.

ಆರ್‌ಟಿಐ ಕಾರ್ಯಕರ್ತರು ಆಗಿದ್ದ ಬುದ್ದಿನಾಥ್‌, ನಕಲಿ ಕ್ಲಿನಿಕ್‌ಗಳ ಕುರಿತು ಸರಣಿ ವರದಿ ಮಾಡಿದ್ದರು. ಕ್ಲಿನಿಕ್‌ಗಳ ಬಗ್ಗೆ ಸುದ್ದಿ ಮಾಡದಂತೆ ಅವರಿಗೆ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದವು ಹಾಗೂ ಲಂಚ ನೀಡುವುದಾಗಿ ಆಮಿಷ ಒಡ್ಡಿದ್ದರು. ಇವೆಲ್ಲವನ್ನು ತಿರಸ್ಕರಿಸಿದ್ದ ಅವರು ಕ್ಲಿನಿಕ್‌ಗಳ ಬಗ್ಗೆ ವಸ್ತುನಿಷ್ಠವಾದ ವರದಿಗಳನ್ನು ಮಾಡಿದ್ದರು. ಅವರು ಕಾಣೆಯಾಗುವ ಮೊದಲು ಕೂಡ ಫೇಸ್‌ಬುಕ್‌ನಲ್ಲಿ ಅಲ್ಲಿನ ಸ್ಥಳೀಯ ಎರಡು ಕ್ಲಿನಿಕ್‌ಗಳು ‘ನಕಲಿ’ ಎಂದು ಆರೋಪಿಸಿ ಪೋಸ್ಟ್‌ ಒಂದನ್ನು ಅಪ್‌ಲೋಡ್‌ ಮಾಡಿದ್ದರು. ಇದಾದ ಎರಡು ದಿನಗಳ ನಂತರ ಅವರು ಕಣ್ಮರೆಯಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ.

‘ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ ಎಂದಿರುವ ಅವರ ಕುಟುಂಬದವರು, ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆನಿಪಟ್ಟಿಯಿಂದ ಪಶ್ಚಿಮಕ್ಕೆ ಸುಮಾರು 5 ಕಿ.ಮೀ ದೂರದಲ್ಲಿರುವ ಬೇಟೌನ್ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ಬುದ್ದಿನಾಥ್‌ ಅವರ ಫೋನ್‌ ಸ್ವಿಚ್ ಆನ್ ಮಾಡಿರುವುದು ಪತ್ತೆಯಾಗಿದೆ. ಮೊಬೈಲ್‌ ಟ್ಯ್ರಾಕ್‌ ಮಾಡುತ್ತಿದ್ದ ಪೊಲೀಸರು ಆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಯಾವುದೇ ಸುಳಿವು ಸಿಗದೇ ಹಿಂದಿರುಗಿದ್ದರು.

ಶುಕ್ರವಾರ, ನವೆಂಬರ್ 12 ರಂದು, ಬುದ್ದಿನಾಥ್ ಅವರ ಸೋದರ ಸಂಬಂಧಿ ಬೆಟೌನ್ ಗ್ರಾಮದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದೆ ಎಂದು ಮಾಹಿತಿ ಪಡೆದರು. ಕೆಲ ಸಂಬಂಧಿಕರು ಮತ್ತು ಅಧಿಕಾರಿಗಳು ಅಲ್ಲಿಗೆ ಧಾವಿಸಿದ್ದು, ಬೆರಳಿನಲ್ಲಿದ್ದ ಉಂಗುರ, ಕಾಲಿನ ಗುರುತು ಹಾಗೂ ಕುತ್ತಿಗೆಯಲ್ಲಿದ್ದ ಸರದಿಂದಾಗಿ ಬುದ್ಧಿನಾಥನ ಶವ ಗುರುತಿಸಿದ್ದಾರೆ.

ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶವವನ್ನು ತಕ್ಷಣ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಇದನ್ನೂ ಓದಿ: ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...