Homeಮುಖಪುಟಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

ಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 22 ವರ್ಷದ ಪತ್ರಕರ್ತ ಮತ್ತು ಆರ್‌ಟಿಐ ಕಾರ್ಯಕರ್ತನ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಬಿಹಾರದ ಮಧುಬನಿ ಜಿಲ್ಲೆಯ ಹಳ್ಳಿಯೊಂದರ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.

ಸಾವನ್ನಪ್ಪಿರುವ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ, ಸ್ಥಳೀಯ ಸುದ್ದಿ ವೆಬ್‌ಸೈಟ್‌ನಲ್ಲಿ ಪರ್ತಕರ್ತರಾಗಿದ್ದರು.

ಆರ್‌ಟಿಐ ಕಾರ್ಯಕರ್ತರು ಆಗಿದ್ದ ಬುದ್ದಿನಾಥ್‌, ನಕಲಿ ಕ್ಲಿನಿಕ್‌ಗಳ ಕುರಿತು ಸರಣಿ ವರದಿ ಮಾಡಿದ್ದರು. ಕ್ಲಿನಿಕ್‌ಗಳ ಬಗ್ಗೆ ಸುದ್ದಿ ಮಾಡದಂತೆ ಅವರಿಗೆ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದವು ಹಾಗೂ ಲಂಚ ನೀಡುವುದಾಗಿ ಆಮಿಷ ಒಡ್ಡಿದ್ದರು. ಇವೆಲ್ಲವನ್ನು ತಿರಸ್ಕರಿಸಿದ್ದ ಅವರು ಕ್ಲಿನಿಕ್‌ಗಳ ಬಗ್ಗೆ ವಸ್ತುನಿಷ್ಠವಾದ ವರದಿಗಳನ್ನು ಮಾಡಿದ್ದರು. ಅವರು ಕಾಣೆಯಾಗುವ ಮೊದಲು ಕೂಡ ಫೇಸ್‌ಬುಕ್‌ನಲ್ಲಿ ಅಲ್ಲಿನ ಸ್ಥಳೀಯ ಎರಡು ಕ್ಲಿನಿಕ್‌ಗಳು ‘ನಕಲಿ’ ಎಂದು ಆರೋಪಿಸಿ ಪೋಸ್ಟ್‌ ಒಂದನ್ನು ಅಪ್‌ಲೋಡ್‌ ಮಾಡಿದ್ದರು. ಇದಾದ ಎರಡು ದಿನಗಳ ನಂತರ ಅವರು ಕಣ್ಮರೆಯಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ.

‘ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ ಎಂದಿರುವ ಅವರ ಕುಟುಂಬದವರು, ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆನಿಪಟ್ಟಿಯಿಂದ ಪಶ್ಚಿಮಕ್ಕೆ ಸುಮಾರು 5 ಕಿ.ಮೀ ದೂರದಲ್ಲಿರುವ ಬೇಟೌನ್ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ಬುದ್ದಿನಾಥ್‌ ಅವರ ಫೋನ್‌ ಸ್ವಿಚ್ ಆನ್ ಮಾಡಿರುವುದು ಪತ್ತೆಯಾಗಿದೆ. ಮೊಬೈಲ್‌ ಟ್ಯ್ರಾಕ್‌ ಮಾಡುತ್ತಿದ್ದ ಪೊಲೀಸರು ಆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಯಾವುದೇ ಸುಳಿವು ಸಿಗದೇ ಹಿಂದಿರುಗಿದ್ದರು.

ಶುಕ್ರವಾರ, ನವೆಂಬರ್ 12 ರಂದು, ಬುದ್ದಿನಾಥ್ ಅವರ ಸೋದರ ಸಂಬಂಧಿ ಬೆಟೌನ್ ಗ್ರಾಮದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದೆ ಎಂದು ಮಾಹಿತಿ ಪಡೆದರು. ಕೆಲ ಸಂಬಂಧಿಕರು ಮತ್ತು ಅಧಿಕಾರಿಗಳು ಅಲ್ಲಿಗೆ ಧಾವಿಸಿದ್ದು, ಬೆರಳಿನಲ್ಲಿದ್ದ ಉಂಗುರ, ಕಾಲಿನ ಗುರುತು ಹಾಗೂ ಕುತ್ತಿಗೆಯಲ್ಲಿದ್ದ ಸರದಿಂದಾಗಿ ಬುದ್ಧಿನಾಥನ ಶವ ಗುರುತಿಸಿದ್ದಾರೆ.

ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶವವನ್ನು ತಕ್ಷಣ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಇದನ್ನೂ ಓದಿ: ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....