Homeಕರೋನಾ ತಲ್ಲಣಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

ಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

- Advertisement -
- Advertisement -

ಬಿಹಾರ ಮತ್ತು ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿ ಮೃತದೇಹಗಳು ಹರಿದು ಬಂದು ಆತಂಕಕ್ಕೆ ಕಾರಣವಾಗಿದ್ದವು. ಇವುಗಳನ್ನು ಹೊರ ತೆಗೆಯಲಾಗುತ್ತಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದ ಗಡಿಯಲ್ಲಿರುವ ರಾಣಿಘಾಟ್ ಬಳಿ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೃತದೇಹಗಳು ಕೊರೊನಾ ಸೋಂಕಿತರದ್ದು ಎಂದು ಸ್ಥಳೀಯರು ಮತ್ತು ಅಧಿಕಾರಿಗಳು ಶಂಕಿಸಿ ಆತಂಕಕ್ಕೆ ಒಳಗಾಗಿದ್ದರು. ನೂರಕ್ಕೂ ಹೆಚ್ಚು ಮೃತದೇಹಗಳು ತೇಲುತ್ತಾ ಬಂದಿವೆ ಎಂದು ಬಿಹಾರದ ಅಧಿಕಾರಿಗಳು ತಿಳಿಸಿದ್ದರು. ಸದ್ಯ 73 ಕ್ಕೂ ಅಧಿಕ ಶವಗಳನ್ನು ನದಿಯಿಂದ ತೆಗೆಯಲಾಗಿದ್ದು, ನಂತರ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಸ್ಥಾಪಿಸಲಾಗಿದೆ ಎಂದು ಉತ್ತರ ಭಾರತದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬಿಹಾರದ ಬಕ್ಸಾರ್‌ನ ಗಂಗಾ ನದಿ ತಟದಲ್ಲಿ ನೂರಕ್ಕೂ ಹೆಚ್ಚು ಮೃತದೇಹಗಳು ಕಂಡು ಬಂದಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಮಂಗಳವಾರ ಬಕ್ಸಾರ್‌ನಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿಯೂ ಗಂಗೆಯಲ್ಲಿ ಮೃತದೇಹಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉತ್ತರ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾಂಪ್ರದಾಯಿಕ ಹಿಂದೂ ಶವಸಂಸ್ಕಾರಗಳಿಗೆ ಕಟ್ಟಿಗೆ ಸಿಗದ ಕಾರಣ ಅಥವಾ ಅಂತ್ಯಕ್ರಿಯೆಗಳಿಂದ ಚಿತಾಗಾರಗಳು ತುಂಬಿರುವ ಕಾರಣ ಮೃತರ ಸಂಬಂಧಿಕರು ಶವಗಳನ್ನು ನದಿಯಲ್ಲಿ ತೇಲಿಬಿಟ್ಟಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.

ಅಂತಿಮ ವಿಧಿ-ವಿಧಾನಗಳನ್ನು ನಡೆಸದೆಯೇ ಈ ಶವಗಳನ್ನು ಗಂಗಾ ನದಿಗೆ ಎಸೆದಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಬಿಹಾರದ ಬಕ್ಸಾರ್‌ನ  ಚೌಸಾ ಗ್ರಾಮದ ಮಹಾದೇವ್ ಘಾಟ್‌ನಲ್ಲಿ ನದಿಯಿಂದ ಹೊರ ತೆಗೆಯಲಾದ ಮೃತದೇಹಗಳನ್ನು ಜೆಸಿಬಿ ಬಳಸಿ ಹೂಳಲಾಗುತ್ತಿದೆ.

ಬಿಹಾರ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ, ಟ್ವೀಟ್ ಮಾಡಿ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಬಳಿಯ ಗಂಗಾ ನದಿಯಲ್ಲಿ ಪತ್ತೆಯಾದ ಮೃತದೇಹಗಳು, 4 ರಿಂದ 5 ದಿನಗಳ ಹಿಂದೆ ಮರಣ ಹೊಂದಿರುವವರ ದೇಹಗಳು ಎಂದು ಮರಣೋತ್ತರ ಪರೀಕ್ಷೆಗಳು ದೃಢಪಡಿಸಿವೆ ಎಂದಿದ್ದಾರೆ.

ಕೊಳೆತಿರುವ ಈ  ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಕೊಚ್ಚಿಕೊಂಡು ಬಂದಿವೆ. ಉತ್ತರ ಪ್ರದೇಶದ ಗಡಿಯಲ್ಲಿ ನದಿಯಲ್ಲಿ ಬಲೆಯನ್ನು ಇರಿಸಲಾಗಿದೆ ಮತ್ತು ಗಸ್ತು ಹೆಚ್ಚಿಸಲಾಗಿದೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಮೃತ ಪಟ್ಟಿರುವವರಲ್ಲಿ ಯಾರೊಬ್ಬರೂ ಬಕ್ಸಾರ್ ಜಿಲ್ಲೆಯ ನಿವಾಸಿಗಳಲ್ಲ ಎಂದು ಚೌಸಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರವೂ ಕೂಡ ಉತ್ತರ ಪ್ರದೇಶದ ಗಹ್ಮರ್ ಜಿಲ್ಲೆಯಲ್ಲಿಯೂ 25 ಮೃತದೇಹಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...