Homeಕರೋನಾ ತಲ್ಲಣಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

ಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

- Advertisement -
- Advertisement -

ಬಿಹಾರ ಮತ್ತು ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿ ಮೃತದೇಹಗಳು ಹರಿದು ಬಂದು ಆತಂಕಕ್ಕೆ ಕಾರಣವಾಗಿದ್ದವು. ಇವುಗಳನ್ನು ಹೊರ ತೆಗೆಯಲಾಗುತ್ತಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದ ಗಡಿಯಲ್ಲಿರುವ ರಾಣಿಘಾಟ್ ಬಳಿ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೃತದೇಹಗಳು ಕೊರೊನಾ ಸೋಂಕಿತರದ್ದು ಎಂದು ಸ್ಥಳೀಯರು ಮತ್ತು ಅಧಿಕಾರಿಗಳು ಶಂಕಿಸಿ ಆತಂಕಕ್ಕೆ ಒಳಗಾಗಿದ್ದರು. ನೂರಕ್ಕೂ ಹೆಚ್ಚು ಮೃತದೇಹಗಳು ತೇಲುತ್ತಾ ಬಂದಿವೆ ಎಂದು ಬಿಹಾರದ ಅಧಿಕಾರಿಗಳು ತಿಳಿಸಿದ್ದರು. ಸದ್ಯ 73 ಕ್ಕೂ ಅಧಿಕ ಶವಗಳನ್ನು ನದಿಯಿಂದ ತೆಗೆಯಲಾಗಿದ್ದು, ನಂತರ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಸ್ಥಾಪಿಸಲಾಗಿದೆ ಎಂದು ಉತ್ತರ ಭಾರತದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬಿಹಾರದ ಬಕ್ಸಾರ್‌ನ ಗಂಗಾ ನದಿ ತಟದಲ್ಲಿ ನೂರಕ್ಕೂ ಹೆಚ್ಚು ಮೃತದೇಹಗಳು ಕಂಡು ಬಂದಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಮಂಗಳವಾರ ಬಕ್ಸಾರ್‌ನಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿಯೂ ಗಂಗೆಯಲ್ಲಿ ಮೃತದೇಹಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉತ್ತರ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾಂಪ್ರದಾಯಿಕ ಹಿಂದೂ ಶವಸಂಸ್ಕಾರಗಳಿಗೆ ಕಟ್ಟಿಗೆ ಸಿಗದ ಕಾರಣ ಅಥವಾ ಅಂತ್ಯಕ್ರಿಯೆಗಳಿಂದ ಚಿತಾಗಾರಗಳು ತುಂಬಿರುವ ಕಾರಣ ಮೃತರ ಸಂಬಂಧಿಕರು ಶವಗಳನ್ನು ನದಿಯಲ್ಲಿ ತೇಲಿಬಿಟ್ಟಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.

ಅಂತಿಮ ವಿಧಿ-ವಿಧಾನಗಳನ್ನು ನಡೆಸದೆಯೇ ಈ ಶವಗಳನ್ನು ಗಂಗಾ ನದಿಗೆ ಎಸೆದಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಬಿಹಾರದ ಬಕ್ಸಾರ್‌ನ  ಚೌಸಾ ಗ್ರಾಮದ ಮಹಾದೇವ್ ಘಾಟ್‌ನಲ್ಲಿ ನದಿಯಿಂದ ಹೊರ ತೆಗೆಯಲಾದ ಮೃತದೇಹಗಳನ್ನು ಜೆಸಿಬಿ ಬಳಸಿ ಹೂಳಲಾಗುತ್ತಿದೆ.

ಬಿಹಾರ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ, ಟ್ವೀಟ್ ಮಾಡಿ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಬಳಿಯ ಗಂಗಾ ನದಿಯಲ್ಲಿ ಪತ್ತೆಯಾದ ಮೃತದೇಹಗಳು, 4 ರಿಂದ 5 ದಿನಗಳ ಹಿಂದೆ ಮರಣ ಹೊಂದಿರುವವರ ದೇಹಗಳು ಎಂದು ಮರಣೋತ್ತರ ಪರೀಕ್ಷೆಗಳು ದೃಢಪಡಿಸಿವೆ ಎಂದಿದ್ದಾರೆ.

ಕೊಳೆತಿರುವ ಈ  ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಕೊಚ್ಚಿಕೊಂಡು ಬಂದಿವೆ. ಉತ್ತರ ಪ್ರದೇಶದ ಗಡಿಯಲ್ಲಿ ನದಿಯಲ್ಲಿ ಬಲೆಯನ್ನು ಇರಿಸಲಾಗಿದೆ ಮತ್ತು ಗಸ್ತು ಹೆಚ್ಚಿಸಲಾಗಿದೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಮೃತ ಪಟ್ಟಿರುವವರಲ್ಲಿ ಯಾರೊಬ್ಬರೂ ಬಕ್ಸಾರ್ ಜಿಲ್ಲೆಯ ನಿವಾಸಿಗಳಲ್ಲ ಎಂದು ಚೌಸಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರವೂ ಕೂಡ ಉತ್ತರ ಪ್ರದೇಶದ ಗಹ್ಮರ್ ಜಿಲ್ಲೆಯಲ್ಲಿಯೂ 25 ಮೃತದೇಹಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...