Homeಕರ್ನಾಟಕಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಧ್ವನಿ ಎತ್ತುವ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಇದೀಗ ನ್ಯೂಸ್‌ಕ್ಲಿಕ್ ವೆಬ್ಸೈಟ್ ಮೇಲೆ ದೆಹಲಿ ಪೊಲೀಸರು ನಡೆಸಿದ ದಾಳಿಯ ಕುರಿತು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್, ”ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ, ಹೇಡಿ ರಾಜನ ಈಡಿ, ಬೇಡಿಯ ತಲೆಬುಡವಿಲ್ಲದ ಆರೋಪಗಳ ಮುಚ್ಚುಮರೆಯ ಹೊಲಸು, ನಾಚಿಕೆಗೆಟ್ಟ ಗೂಂಡಾಗಿರಿ ರಾಜಕೀಯ.. ವಿಶೇಷಣಗಳು ಸಾಲುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

”ಚೀನಾ ಅತಿಕ್ರಮಣವನ್ನು ಮುಚ್ಚಿಹಾಕಿದಾಗ, ಚೀನಾ ಕಂಪೆನಿಗಳು ಸಾವಿರಾರು ಕೋಟಿ, ಗೆಳೆಯ ಅದಾನಿಗೆ ಕಾನೂನು ಬಾಹಿರವಾಗಿಯೂ ಕೊಡುತ್ತಲೇ ಇರುವಾಗ, ಲೆಕ್ಕಪುಸ್ತಕವಿಲ್ಲದ ಪಿಎಮ್ ಕೇರ್ಸ್‌ಗೆ, ಗೋದೀ ಚಾನೆಲ್‌ಗಳಿಗೆ, ಐಪಿಎಲ್‌ಗೆ ಕಾನೂನು ಪ್ರಕಾರವೇ ಕೊಟ್ಟಾಗಲೆಲ್ಲ ಕಾಣದ ದೇಶದ್ರೋಹ, ಅದೇ ಚೀನೀ ಕಂಪನಿಗಳು ಹಣ ಕೊಟ್ಟದ್ದಕ್ಕೆ ಪ್ರಾಮಾಣಿಕವಾಗಿ ಜನಪರವಾಗಿ ಕೆಲಸ ಮಾಡುವ ಪತ್ರಕರ್ತರ ಕೆಲಸದಲ್ಲಿ ಕಂಡುಬಿಟ್ಟಿತಲ್ಲ. ಹಾಗಾದರೆ ವಿವೊ, ಶಾಒಮಿ ಫೋನು ಬಳಸುವ ನಾವು ನೀವೆಲ್ಲರೂ ಇವರ ಪ್ರಕಾರ ದೇಶದ್ರೋಹಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.

”ಚೀನಾದ ಜೊತೆ ಸಾವಿರಾರು ಕೋಟಿ ವ್ಯಾಪಾರ ನಡೆಸುತ್ತಿರುವ ಭಾರತ ಸರ್ಕಾರ?? ಇವರ ತಲೆಬುಡವಿಲ್ಲದ ಆರೋಪಗಳಿಗೆ ಆಧಾರವೇನು? ಆ ಕಂಪನಿಗಳನ್ನು ಮುಚ್ಚಿಸುತ್ತಾರೆಯೇ?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

”ಸುಮ್ಮನೇ ಏನು ಭಾರತದ ಪತ್ರಿಕಾ ಸ್ವಾತಂತ್ರ್ಯ ಜಗತ್ತಿನಲ್ಲಿ 161ನೇ ಸ್ಥಾನಕ್ಕೆ ಹೋಗಿಲ್ಲ.. ಹೀಗೇ ಬಾಯಿಮುಚ್ಚಿಸುವುದು ಮುಂದುವರೆದರೆ, ಪ್ರಾಮಾಣಿಕ ಪತ್ರಕರ್ತರನ್ನು, ಸಂಜೀವ್ ಭಟ್, ಶ್ರೀಕುಮಾರರಂಥ ಪ್ರಾಮಾಣಿಕ ಪೋಲೀಸರನ್ನು, ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವಿರೋಧಪಕ್ಷದ ಜನಪ್ರತಿನಿಧಿಗಳನ್ನು ಒಟ್ಟಿನಲ್ಲಿ ದೇಶದ ಜನಪರ ಪ್ರಾಮಾಣಿಕರೆಲ್ಲರನ್ನೂ ಫೋಟೋದಲ್ಲಿ, ಜೈಲಿನಲ್ಲಿ ಇಲ್ಲಾ ಸಿನಿಮಾದಲ್ಲಿ ಮಾತ್ರ ನೋಡಬೇಕಷ್ಟೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ನಮಗಾಗಿ ಹೋರಾಡಿದ ಜನ ಜೈಲಿಗೆ ಹೋಗುವಾಗ ಬಾಯಿಮುಚ್ಚಿ ಕುಳಿತ ನಾವು ಯೋಚಿಸಬೇಡವೇ?
ನಮ್ಮ ಮುಂದಿನ ಪೀಳಿಗೆಯ ಗತಿಯೇನೆಂದು?? ನಮ್ಮ ಮಕ್ಕಳು ಭ್ರಷ್ಟರಾಗಬೇಕು ಇಲ್ಲಾ ಜೈಲು ಸೇರಬೇಕು ಅಲ್ಲವೇ??” ಎಂದು ನಟ ಕಿಶೋರ್ ಕುಮಾರ್ ಜನರು ಮುಂದೆ ಪ್ರಶ್ನೆಗಳನ್ನು ಇಟ್ಟಿದ್ದಾರೆ.

ಇದನ್ನೂ ಓದಿ: ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Don’t be in partial??? Criticize your congress and other currupted people. Why you only blame Modi. And why you silent in your brother devil terrorist.? Only critise, blame hindus…. Very sad.

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...