HomeUncategorizedದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌‌ಟಿಯ ದೋಷಪೂರಿತ ಅನುಷ್ಠಾನವು ಆರ್ಥಿಕತೆಯನ್ನು ನಾಶಪಡಿಸಿದೆ, ಇದು ಆರ್ಥಿಕತೆಯಲ್ಲಿರುವ ಅಸಂಘಟಿತ ವಲಯಕ್ಕೆ ಎರಡನೇ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಸುಲಭ ತೆರಿಗೆ ವಿಧಿಸುವ ಕಲ್ಪನೆಯಾದ ಜಿಎಸ್‌ಟಿಯನ್ನು ಬಿಜೆಪಿ ಸರ್ಕಾರ ಸಂಕೀರ್ಣ ಮತ್ತು ಕಷ್ಟಕರವನ್ನಾಗಿ ಮಾಡಿದೆ ಎಂದು ತನ್ನ ಸರಣಿಯ ಮೂರನೇ ವೀಡಿಯೊದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕುಸಿತ: ದೇವರ ಕಾರ್ಯ ಎಂದ ಕೇಂದ್ರ ಸರ್ಕಾರ!

“ಎನ್‌ಡಿಎ ಸರ್ಕಾರವು ಜಾರಿಗೆ ತಂದ ಜಿಎಸ್‌ಟಿ ವಿಭಿನ್ನವಾಗಿದೆ. ಯಾಕೆಂದರೆ ನಾಲ್ಕು ಹಂತದ ತೆರಿಗೆಗಳು ಶೇಕಡಾ 28 ರಷ್ಟಿದೆ, ಇದು ತುಂಬಾ ಸಂಕೀರ್ಣವಾಗಿದೆ ಮತ್ತು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಅವರು ಹೇಳಿದರು.

ದೊಡ್ಡ ಕಂಪನಿಗಳು ಸಾಕಷ್ಟು ಅಕೌಂಟೆಂಟ್‌ಗಳನ್ನು ನೇಮಿಸಬಹುದು, ಆದರೆ ಸಣ್ಣ ಮತ್ತು ಮಧ್ಯಮ ವ್ಯವಹಾರಗಳು ಈ ತೆರಿಗೆ ವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ತೆರಿಗೆ ದರಗಳ ನಾಲ್ಕು ಹಂತಗಳಲ್ಲಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸಂಪನ್ಮೂಲಗಳನ್ನು ಹೊಂದಿರುವವರು ಇದನ್ನು ಅನುಸರಿಸಬಹುದು, ಆದರೆ ಸಣ್ಣ ಮತ್ತು ಅಲ್ಪ ವ್ಯವಹಾರಗಳು ಹೊಂದಿರುವವರು ಇದರಿಂದ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಭಾರತದ ದೊಡ್ಡ 15 ರಿಂದ 20 ಕೈಗಾರಿಕೋದ್ಯಮಿಗಳಿಗೆ ಲಾಭ ಆಗುತಂತೆ ಮಾಡಲು ಈ ತೆರಿಗೆ ಪದ್ದತಿಯನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ; ಫ್ಯಾಕ್ಟ್‌‌ಚೆಕ್‌

“ಜಿಎಸ್‌ಟಿ ಸಂಪೂರ್ಣ ವೈಫಲ್ಯವಾಗಿದೆ, ಅದು ಯಶಸ್ವಿಯಾಗುವುದಿಲ್ಲ, ಇದು ಬಡವರ ಮೇಲೆ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಮೇಲಿನ ಆಕ್ರಮಣವಾಗಿದೆ. ಜಿಎಸ್‌ಟಿ ತೆರಿಗೆ ವ್ಯವಸ್ಥೆಯಲ್ಲ, ಇದು ಭಾರತದ ಬಡವರ ಮೇಲಿನ ಆಕ್ರಮಣವಾಗಿದೆ. ಇದು ಒಂದು ಸಣ್ಣ ಅಂಗಡಿಯವರು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳು, ರೈತರು ಮತ್ತು ಕಾರ್ಮಿಕರ ಮೇಲೆ ದಾಳಿ” ಎಂದು ಅವರು ತೀವ್ರ ದಾಳಿ ಮಾಡಿದ್ದಾರೆ.

ಈ ದಾಳಿಯನ್ನು ಗುರುತಿಸಿ ಮತ್ತು ಅದರ ವಿರುದ್ಧ ಒಟ್ಟಾಗಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಜಿಎಸ್‌ಟಿಯ ಫಲಿತಾಂಶವೇನು ಎಂದು ಕೇಳಿರುವ ಅವರು, ಇಂದು ಭಾರತ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರದ ಹಣವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಹಣವನ್ನು ನೀಡಲು ರಾಜ್ಯಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಜಿಎಸ್‌ಟಿ ಸಂಗ್ರಹ ಕುಸಿತದ ಬಗ್ಗೆ ಆಗಸ್ಟ್‌ 27 ರಂದು ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಅಸಹಾಯಕತೆ ಪ್ರದರ್ಶಿಸಿದ್ದರು.

ರಾಹುಲ್ ಗಾಂಧಿ ಕಳೆದ ಬುಧವಾರ ಪ್ರಸಾರ ಮಾಡಿದ್ದ ವಿಡಿಯೋದಲ್ಲಿ ನೋಟ್‌ಬ್ಯಾನ್‌ ವಿಷಯವೆತ್ತಿ ಕೇಂದ್ರ ಸರ್ಕಾರದ ವಿರುದ್ದ ದಾಳಿ ಮಾಡಿದ್ದರು. ನೋಟ್‌ಬ್ಯಾನ್‌ ಭಾರತದ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿಯವರ ಮೇಲಿನ ದಾಳಿ ಎಂದಿದ್ದ ಅವರು ಇದು ಭಾರತದ ಅಸಂಘಟಿತ ಆರ್ಥಿಕತೆಯ ಮೇಲಿನ ದಾಳಿ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...