HomeUncategorizedದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌‌ಟಿಯ ದೋಷಪೂರಿತ ಅನುಷ್ಠಾನವು ಆರ್ಥಿಕತೆಯನ್ನು ನಾಶಪಡಿಸಿದೆ, ಇದು ಆರ್ಥಿಕತೆಯಲ್ಲಿರುವ ಅಸಂಘಟಿತ ವಲಯಕ್ಕೆ ಎರಡನೇ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಸುಲಭ ತೆರಿಗೆ ವಿಧಿಸುವ ಕಲ್ಪನೆಯಾದ ಜಿಎಸ್‌ಟಿಯನ್ನು ಬಿಜೆಪಿ ಸರ್ಕಾರ ಸಂಕೀರ್ಣ ಮತ್ತು ಕಷ್ಟಕರವನ್ನಾಗಿ ಮಾಡಿದೆ ಎಂದು ತನ್ನ ಸರಣಿಯ ಮೂರನೇ ವೀಡಿಯೊದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕುಸಿತ: ದೇವರ ಕಾರ್ಯ ಎಂದ ಕೇಂದ್ರ ಸರ್ಕಾರ!

“ಎನ್‌ಡಿಎ ಸರ್ಕಾರವು ಜಾರಿಗೆ ತಂದ ಜಿಎಸ್‌ಟಿ ವಿಭಿನ್ನವಾಗಿದೆ. ಯಾಕೆಂದರೆ ನಾಲ್ಕು ಹಂತದ ತೆರಿಗೆಗಳು ಶೇಕಡಾ 28 ರಷ್ಟಿದೆ, ಇದು ತುಂಬಾ ಸಂಕೀರ್ಣವಾಗಿದೆ ಮತ್ತು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಅವರು ಹೇಳಿದರು.

ದೊಡ್ಡ ಕಂಪನಿಗಳು ಸಾಕಷ್ಟು ಅಕೌಂಟೆಂಟ್‌ಗಳನ್ನು ನೇಮಿಸಬಹುದು, ಆದರೆ ಸಣ್ಣ ಮತ್ತು ಮಧ್ಯಮ ವ್ಯವಹಾರಗಳು ಈ ತೆರಿಗೆ ವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ತೆರಿಗೆ ದರಗಳ ನಾಲ್ಕು ಹಂತಗಳಲ್ಲಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸಂಪನ್ಮೂಲಗಳನ್ನು ಹೊಂದಿರುವವರು ಇದನ್ನು ಅನುಸರಿಸಬಹುದು, ಆದರೆ ಸಣ್ಣ ಮತ್ತು ಅಲ್ಪ ವ್ಯವಹಾರಗಳು ಹೊಂದಿರುವವರು ಇದರಿಂದ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಭಾರತದ ದೊಡ್ಡ 15 ರಿಂದ 20 ಕೈಗಾರಿಕೋದ್ಯಮಿಗಳಿಗೆ ಲಾಭ ಆಗುತಂತೆ ಮಾಡಲು ಈ ತೆರಿಗೆ ಪದ್ದತಿಯನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ; ಫ್ಯಾಕ್ಟ್‌‌ಚೆಕ್‌

“ಜಿಎಸ್‌ಟಿ ಸಂಪೂರ್ಣ ವೈಫಲ್ಯವಾಗಿದೆ, ಅದು ಯಶಸ್ವಿಯಾಗುವುದಿಲ್ಲ, ಇದು ಬಡವರ ಮೇಲೆ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಮೇಲಿನ ಆಕ್ರಮಣವಾಗಿದೆ. ಜಿಎಸ್‌ಟಿ ತೆರಿಗೆ ವ್ಯವಸ್ಥೆಯಲ್ಲ, ಇದು ಭಾರತದ ಬಡವರ ಮೇಲಿನ ಆಕ್ರಮಣವಾಗಿದೆ. ಇದು ಒಂದು ಸಣ್ಣ ಅಂಗಡಿಯವರು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳು, ರೈತರು ಮತ್ತು ಕಾರ್ಮಿಕರ ಮೇಲೆ ದಾಳಿ” ಎಂದು ಅವರು ತೀವ್ರ ದಾಳಿ ಮಾಡಿದ್ದಾರೆ.

ಈ ದಾಳಿಯನ್ನು ಗುರುತಿಸಿ ಮತ್ತು ಅದರ ವಿರುದ್ಧ ಒಟ್ಟಾಗಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಜಿಎಸ್‌ಟಿಯ ಫಲಿತಾಂಶವೇನು ಎಂದು ಕೇಳಿರುವ ಅವರು, ಇಂದು ಭಾರತ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರದ ಹಣವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಹಣವನ್ನು ನೀಡಲು ರಾಜ್ಯಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಜಿಎಸ್‌ಟಿ ಸಂಗ್ರಹ ಕುಸಿತದ ಬಗ್ಗೆ ಆಗಸ್ಟ್‌ 27 ರಂದು ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಅಸಹಾಯಕತೆ ಪ್ರದರ್ಶಿಸಿದ್ದರು.

ರಾಹುಲ್ ಗಾಂಧಿ ಕಳೆದ ಬುಧವಾರ ಪ್ರಸಾರ ಮಾಡಿದ್ದ ವಿಡಿಯೋದಲ್ಲಿ ನೋಟ್‌ಬ್ಯಾನ್‌ ವಿಷಯವೆತ್ತಿ ಕೇಂದ್ರ ಸರ್ಕಾರದ ವಿರುದ್ದ ದಾಳಿ ಮಾಡಿದ್ದರು. ನೋಟ್‌ಬ್ಯಾನ್‌ ಭಾರತದ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿಯವರ ಮೇಲಿನ ದಾಳಿ ಎಂದಿದ್ದ ಅವರು ಇದು ಭಾರತದ ಅಸಂಘಟಿತ ಆರ್ಥಿಕತೆಯ ಮೇಲಿನ ದಾಳಿ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...