HomeUncategorizedದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌‌ಟಿಯ ದೋಷಪೂರಿತ ಅನುಷ್ಠಾನವು ಆರ್ಥಿಕತೆಯನ್ನು ನಾಶಪಡಿಸಿದೆ, ಇದು ಆರ್ಥಿಕತೆಯಲ್ಲಿರುವ ಅಸಂಘಟಿತ ವಲಯಕ್ಕೆ ಎರಡನೇ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಸುಲಭ ತೆರಿಗೆ ವಿಧಿಸುವ ಕಲ್ಪನೆಯಾದ ಜಿಎಸ್‌ಟಿಯನ್ನು ಬಿಜೆಪಿ ಸರ್ಕಾರ ಸಂಕೀರ್ಣ ಮತ್ತು ಕಷ್ಟಕರವನ್ನಾಗಿ ಮಾಡಿದೆ ಎಂದು ತನ್ನ ಸರಣಿಯ ಮೂರನೇ ವೀಡಿಯೊದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕುಸಿತ: ದೇವರ ಕಾರ್ಯ ಎಂದ ಕೇಂದ್ರ ಸರ್ಕಾರ!

“ಎನ್‌ಡಿಎ ಸರ್ಕಾರವು ಜಾರಿಗೆ ತಂದ ಜಿಎಸ್‌ಟಿ ವಿಭಿನ್ನವಾಗಿದೆ. ಯಾಕೆಂದರೆ ನಾಲ್ಕು ಹಂತದ ತೆರಿಗೆಗಳು ಶೇಕಡಾ 28 ರಷ್ಟಿದೆ, ಇದು ತುಂಬಾ ಸಂಕೀರ್ಣವಾಗಿದೆ ಮತ್ತು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಅವರು ಹೇಳಿದರು.

ದೊಡ್ಡ ಕಂಪನಿಗಳು ಸಾಕಷ್ಟು ಅಕೌಂಟೆಂಟ್‌ಗಳನ್ನು ನೇಮಿಸಬಹುದು, ಆದರೆ ಸಣ್ಣ ಮತ್ತು ಮಧ್ಯಮ ವ್ಯವಹಾರಗಳು ಈ ತೆರಿಗೆ ವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ತೆರಿಗೆ ದರಗಳ ನಾಲ್ಕು ಹಂತಗಳಲ್ಲಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸಂಪನ್ಮೂಲಗಳನ್ನು ಹೊಂದಿರುವವರು ಇದನ್ನು ಅನುಸರಿಸಬಹುದು, ಆದರೆ ಸಣ್ಣ ಮತ್ತು ಅಲ್ಪ ವ್ಯವಹಾರಗಳು ಹೊಂದಿರುವವರು ಇದರಿಂದ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಭಾರತದ ದೊಡ್ಡ 15 ರಿಂದ 20 ಕೈಗಾರಿಕೋದ್ಯಮಿಗಳಿಗೆ ಲಾಭ ಆಗುತಂತೆ ಮಾಡಲು ಈ ತೆರಿಗೆ ಪದ್ದತಿಯನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ; ಫ್ಯಾಕ್ಟ್‌‌ಚೆಕ್‌

“ಜಿಎಸ್‌ಟಿ ಸಂಪೂರ್ಣ ವೈಫಲ್ಯವಾಗಿದೆ, ಅದು ಯಶಸ್ವಿಯಾಗುವುದಿಲ್ಲ, ಇದು ಬಡವರ ಮೇಲೆ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಮೇಲಿನ ಆಕ್ರಮಣವಾಗಿದೆ. ಜಿಎಸ್‌ಟಿ ತೆರಿಗೆ ವ್ಯವಸ್ಥೆಯಲ್ಲ, ಇದು ಭಾರತದ ಬಡವರ ಮೇಲಿನ ಆಕ್ರಮಣವಾಗಿದೆ. ಇದು ಒಂದು ಸಣ್ಣ ಅಂಗಡಿಯವರು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳು, ರೈತರು ಮತ್ತು ಕಾರ್ಮಿಕರ ಮೇಲೆ ದಾಳಿ” ಎಂದು ಅವರು ತೀವ್ರ ದಾಳಿ ಮಾಡಿದ್ದಾರೆ.

ಈ ದಾಳಿಯನ್ನು ಗುರುತಿಸಿ ಮತ್ತು ಅದರ ವಿರುದ್ಧ ಒಟ್ಟಾಗಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಜಿಎಸ್‌ಟಿಯ ಫಲಿತಾಂಶವೇನು ಎಂದು ಕೇಳಿರುವ ಅವರು, ಇಂದು ಭಾರತ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರದ ಹಣವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಹಣವನ್ನು ನೀಡಲು ರಾಜ್ಯಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಜಿಎಸ್‌ಟಿ ಸಂಗ್ರಹ ಕುಸಿತದ ಬಗ್ಗೆ ಆಗಸ್ಟ್‌ 27 ರಂದು ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಅಸಹಾಯಕತೆ ಪ್ರದರ್ಶಿಸಿದ್ದರು.

ರಾಹುಲ್ ಗಾಂಧಿ ಕಳೆದ ಬುಧವಾರ ಪ್ರಸಾರ ಮಾಡಿದ್ದ ವಿಡಿಯೋದಲ್ಲಿ ನೋಟ್‌ಬ್ಯಾನ್‌ ವಿಷಯವೆತ್ತಿ ಕೇಂದ್ರ ಸರ್ಕಾರದ ವಿರುದ್ದ ದಾಳಿ ಮಾಡಿದ್ದರು. ನೋಟ್‌ಬ್ಯಾನ್‌ ಭಾರತದ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿಯವರ ಮೇಲಿನ ದಾಳಿ ಎಂದಿದ್ದ ಅವರು ಇದು ಭಾರತದ ಅಸಂಘಟಿತ ಆರ್ಥಿಕತೆಯ ಮೇಲಿನ ದಾಳಿ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...