Homeಮುಖಪುಟಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

ಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಸಂಸತ್ತಿನಲ್ಲಿ ಭಾಷಣ ಮಾಡಲು ಮತ್ತು ಮತಗಳಿಗಾಗಿ ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದರು, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ಇಂದು(ಮಾ.4) ರದ್ದುಗೊಳಿಸಿದೆ. ಮೂಲಕ ಮತ್ತೊಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಸಂಸತ್‌ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಸಂಸದರು, ಶಾಸಕರು ಲಂಚ ಪಡೆಯುವ ಪ್ರಕರಣಗಳಲ್ಲಿ ಕಾನೂನು ಕ್ರಮದ ವಿನಾಯಿತಿ ಒದಗಿಸಿದ್ದ ಐವರು ಸದಸ್ಯರ ಸಂವಿಧಾನ ಪೀಠದ 1998ರ ತೀರ್ಪನ್ನು ಇಂದಿನ ತೀರ್ಪು ರದ್ದುಗೊಳಿಸಿದೆ.

“ಲಂಚ ಪಡೆಯುದನ್ನು ಸಂಸದೀಯ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ ಮತ್ತು 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ”. ಈ ಎರಡು ವಿಧಿಗಳು ಚುನಾಯಿತ ಪ್ರತಿನಿಧಿಗಳಿಗೆ ಭಯವಿಲ್ಲದೆ ಕೆಲಸ ಮಾಡಲು ಅನುವು ಮಾಡಿಕೊಡಲು ಕಾನೂನು ಕ್ರಮದಿಂದ ವಿನಾಯಿತಿಯನ್ನು ಒದಗಿಸುತ್ತವೆ.

“ಪಿವಿ ನರಸಿಂಹ ರಾವ್ ಪ್ರಕರಣದ 1998ರ ತೀರ್ಪನ್ನು ನಾವು ಒಪ್ಪುವುದಿಲ್ಲ. ಮತ ಚಲಾಯಿಸಲು ಅಥವಾ ಭಾಷಣ ಮಾಡಲು ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದ, ಶಾಸಕರಿಗೆ ವಿನಾಯಿತಿ ನೀಡುವ ಈ ತೀರ್ಪು ವ್ಯಾಪಕ ಪರಿಣಾಮಗಳನ್ನು ಬೀರುತ್ತವೆ” ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.

1998ರಲ್ಲಿ, ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ಪಿವಿ ನರಸಿಂಹ ರಾವ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನೀಡಿದ ಬಹುಮತದ ತೀರ್ಪಿನಲ್ಲಿ, 105 (2) ನೇ ವಿಧಿಯ ಅಡಿಯಲ್ಲಿ ಸದನದ ಒಳಗೆ ಮಾಡಿದ ಯಾವುದೇ ಭಾಷಣ ಮತ್ತು ಮತಕ್ಕಾಗಿ ಕ್ರಿಮಿನಲ್ ಮೊಕದ್ದಮೆಯ ವಿರುದ್ಧ ಸಂಸದರಿಗೆ ವಿನಾಯಿತಿ ಇದೆ ಎಂದು ಹೇಳಿದೆ.

“ಲಂಚವನ್ನು ಸಂಸತ್ತಿನ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ. ಭ್ರಷ್ಟಾಚಾರ ಅಥವಾ ಸಂಸದರು ಲಂಚ ಪಡೆಯುವುದು ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಲಂಚ ಪಡೆಯುವ ಶಾಸಕರೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹೊಣೆಗಾರರಾಗಿದ್ದಾರೆ” ಎಂದು ಪೀಠ ಹೇಳಿದೆ.

ಪಿವಿ ನರಸಿಂಹ ರಾವ್ ಪ್ರಕರಣದ ತೀರ್ಪು, ಲಂಚ ಸ್ವೀಕರಿಸಿ ಅದರಂತೆ ಮತ ಚಲಾಯಿಸುವ ಶಾಸಕರನ್ನು ರಕ್ಷಿಸಿದರೆ, ಲಂಚ ಪಡೆದರೂ ಸ್ವತಂತ್ರವಾಗಿ ಮತ ಚಲಾಯಿಸುವ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸುವ ‘ವಿರೋಧಾಭಾಸದ ಪರಿಸ್ಥಿತಿ’ ಉಂಟಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಇದನ್ನೂ ಓದಿ: ಸುಪ್ರೀಂನಿಂದ ಮತ್ತೊಂದು ಮಹತ್ವದ ತೀರ್ಪು; ಲಂಚ ಪ್ರಕರಣಗಳಲ್ಲಿ ಶಾಸಕರು ಮತ್ತು ಸಂಸದರಿಗಿಲ್ಲ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...