Homeಮುಖಪುಟಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

ಸಂಸದ, ಶಾಸಕರ ಭ್ರಷ್ಟಾಚಾರ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಸಂಸತ್ತಿನಲ್ಲಿ ಭಾಷಣ ಮಾಡಲು ಮತ್ತು ಮತಗಳಿಗಾಗಿ ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದರು, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ಇಂದು(ಮಾ.4) ರದ್ದುಗೊಳಿಸಿದೆ. ಮೂಲಕ ಮತ್ತೊಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಸಂಸತ್‌ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಸಂಸದರು, ಶಾಸಕರು ಲಂಚ ಪಡೆಯುವ ಪ್ರಕರಣಗಳಲ್ಲಿ ಕಾನೂನು ಕ್ರಮದ ವಿನಾಯಿತಿ ಒದಗಿಸಿದ್ದ ಐವರು ಸದಸ್ಯರ ಸಂವಿಧಾನ ಪೀಠದ 1998ರ ತೀರ್ಪನ್ನು ಇಂದಿನ ತೀರ್ಪು ರದ್ದುಗೊಳಿಸಿದೆ.

“ಲಂಚ ಪಡೆಯುದನ್ನು ಸಂಸದೀಯ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ ಮತ್ತು 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ”. ಈ ಎರಡು ವಿಧಿಗಳು ಚುನಾಯಿತ ಪ್ರತಿನಿಧಿಗಳಿಗೆ ಭಯವಿಲ್ಲದೆ ಕೆಲಸ ಮಾಡಲು ಅನುವು ಮಾಡಿಕೊಡಲು ಕಾನೂನು ಕ್ರಮದಿಂದ ವಿನಾಯಿತಿಯನ್ನು ಒದಗಿಸುತ್ತವೆ.

“ಪಿವಿ ನರಸಿಂಹ ರಾವ್ ಪ್ರಕರಣದ 1998ರ ತೀರ್ಪನ್ನು ನಾವು ಒಪ್ಪುವುದಿಲ್ಲ. ಮತ ಚಲಾಯಿಸಲು ಅಥವಾ ಭಾಷಣ ಮಾಡಲು ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದ, ಶಾಸಕರಿಗೆ ವಿನಾಯಿತಿ ನೀಡುವ ಈ ತೀರ್ಪು ವ್ಯಾಪಕ ಪರಿಣಾಮಗಳನ್ನು ಬೀರುತ್ತವೆ” ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.

1998ರಲ್ಲಿ, ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ಪಿವಿ ನರಸಿಂಹ ರಾವ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನೀಡಿದ ಬಹುಮತದ ತೀರ್ಪಿನಲ್ಲಿ, 105 (2) ನೇ ವಿಧಿಯ ಅಡಿಯಲ್ಲಿ ಸದನದ ಒಳಗೆ ಮಾಡಿದ ಯಾವುದೇ ಭಾಷಣ ಮತ್ತು ಮತಕ್ಕಾಗಿ ಕ್ರಿಮಿನಲ್ ಮೊಕದ್ದಮೆಯ ವಿರುದ್ಧ ಸಂಸದರಿಗೆ ವಿನಾಯಿತಿ ಇದೆ ಎಂದು ಹೇಳಿದೆ.

“ಲಂಚವನ್ನು ಸಂಸತ್ತಿನ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ. ಭ್ರಷ್ಟಾಚಾರ ಅಥವಾ ಸಂಸದರು ಲಂಚ ಪಡೆಯುವುದು ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಲಂಚ ಪಡೆಯುವ ಶಾಸಕರೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹೊಣೆಗಾರರಾಗಿದ್ದಾರೆ” ಎಂದು ಪೀಠ ಹೇಳಿದೆ.

ಪಿವಿ ನರಸಿಂಹ ರಾವ್ ಪ್ರಕರಣದ ತೀರ್ಪು, ಲಂಚ ಸ್ವೀಕರಿಸಿ ಅದರಂತೆ ಮತ ಚಲಾಯಿಸುವ ಶಾಸಕರನ್ನು ರಕ್ಷಿಸಿದರೆ, ಲಂಚ ಪಡೆದರೂ ಸ್ವತಂತ್ರವಾಗಿ ಮತ ಚಲಾಯಿಸುವ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸುವ ‘ವಿರೋಧಾಭಾಸದ ಪರಿಸ್ಥಿತಿ’ ಉಂಟಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಇದನ್ನೂ ಓದಿ: ಸುಪ್ರೀಂನಿಂದ ಮತ್ತೊಂದು ಮಹತ್ವದ ತೀರ್ಪು; ಲಂಚ ಪ್ರಕರಣಗಳಲ್ಲಿ ಶಾಸಕರು ಮತ್ತು ಸಂಸದರಿಗಿಲ್ಲ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...