Homeಮುಖಪುಟಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

- Advertisement -
- Advertisement -

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು ಜೊತೆ ಸೇರಿ ಆರ್‌ಜೆಡಿ ಮೈತ್ರಿ ಸರ್ಕಾರ ರಚಿಸಿದ ನಂತರದಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮತ್ತೆ ತೆರೆದಿದೆ.

ಲಾಲ್‌ ಪ್ರಸಾದ್‌ ಅವರು ಯುಪಿಎ ಮೊದಲ ಅವಧಿಯಲ್ಲಿ ಸಚಿವರಾಗಿದ್ದಾಗ ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪಗಳು ಬಂದಿದ್ದವು. 2018ರಲ್ಲಿ ಸಿಬಿಐ ತನಿಖೆಯನ್ನು ಪ್ರಾರಂಭಿಸಿತ್ತು.

“ಆರೋಪ ಮಾಡಲಾಗಿದ್ದರೂ ಯಾವುದೇ ಪ್ರಕರಣವಿಲ್ಲ” ಎಂದು ಸಿಬಿಐ ಮೂಲಗಳು ಹೇಳುವ ಮೂಲಕ ವಿಚಾರಣೆಯನ್ನು ಮೇ 2021 ರಲ್ಲಿ ಮುಚ್ಚಲಾಗಿತ್ತು. ಲಾಲೂ ಪ್ರಸಾದ್‌ ಅವರಲ್ಲದೆ, ಅವರ ಪುತ್ರ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಚಂದಾ ಯಾದವ್, ರಾಗಿಣಿ ಯಾದವ್ ಅವರ ಹೆಸರನ್ನೂ ಪ್ರಕರಣದಲ್ಲಿ ಸೇರಿಸಲಾಗಿತ್ತು.

ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಬಿಜೆಪಿಯಿಂದ ಬೇರ್ಪಟ್ಟು ಸರ್ಕಾರ ರಚಿಸಲು ಆರ್‌ಜೆಡಿ ಜೊತೆ ಕೈಜೋಡಿಸಿದ ನಂತರದಲ್ಲಿ ಪ್ರಕರಣವನ್ನು ಮತ್ತೆ ತೆರೆಯಲು ಸಿಬಿಐ ಮುಂದಾಗಿದೆ. ತಮ್ಮ ಪಕ್ಷವನ್ನು ವಿಭಜಿಸಲು ಬಿಜೆಪಿ ರೂಪಿಸಿರುವ ಯೋಜನೆ ಇದೆಂದು ನಿತೀಶ್‌ ಕುಮಾರ್‌ ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ತಮ್ಮ ಆರೋಪಗಳನ್ನು ಮಾಡುತ್ತಿರುವ ಹೊತ್ತಿನಲ್ಲಿ ಸಿಬಿಐನ ಹೊಸ ಕ್ರಮವು ಭಾರೀ ರಾಜಕೀಯ ಗದ್ದಲವನ್ನು ಹುಟ್ಟುಹಾಕುವ ಸಾಧ್ಯತೆ ಇದೆ.

ಮುಂಬೈನ ಬಾಂದ್ರಾದ ರೈಲು ಭೂಮಿ ಗುತ್ತಿಗೆ ಯೋಜನೆ ಮತ್ತು ಹೊಸ ದೆಹಲಿ ರೈಲು ನಿಲ್ದಾಣದ ನವೀಕರಣದ ಕಾರ್ಯದಲ್ಲಿ ಆಸಕ್ತಿ ಹೊಂದಿದ್ದ ರಿಯಲ್ ಎಸ್ಟೇಟ್ ಸಂಸ್ಥೆಯಾದ ಡಿಎಲ್‌ಎಫ್ ಗ್ರೂಪ್‌ನಿಂದ ಲಾಲು ಪ್ರಸಾದ್‌ ಯಾದವ್ ಅವರು ದಕ್ಷಿಣ ದೆಹಲಿಯ ಆಸ್ತಿಯನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.

ಶೆಲ್ ಕಂಪನಿಯು ₹ 5 ಕೋಟಿಗೆ ಆಸ್ತಿಯನ್ನು ಖರೀದಿಸಿದೆ. ಆದರೆ ಅಂದಿನ ಮಾರುಕಟ್ಟೆ ದರ ₹ 30 ಕೋಟಿಗಿಂತ ಕಡಿಮೆ ಇರಲಿಲ್ಲ ಎಂದು ದೂರಲಾಗಿದೆ.

ಶೆಲ್ ಕಂಪನಿಯನ್ನು ತೇಜಸ್ವಿ ಯಾದವ್ ಮತ್ತು ಲಾಲೂ ಪ್ರಸಾದ್‌ ಯಾದವ್ ಅವರ ಇತರ ಸಂಬಂಧಿಕರು ಷೇರುಗಳ ವರ್ಗಾವಣೆಯ ಮೂಲಕ ಕೇವಲ ₹ 4 ಲಕ್ಷಕ್ಕೆ ಖರೀದಿಸಿದರು. ಅವರಿಗೆ ದಕ್ಷಿಣ ದೆಹಲಿ ಬಂಗಲೆಯ ಮಾಲೀಕತ್ವವನ್ನು ನೀಡಲಾಯಿತು ಎಂದು ಆರೋಪಿಸಲಾಗಿದೆ.

73 ವರ್ಷದ ಲಾಲು ಅವರು ಈ ತಿಂಗಳ ಆರಂಭದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಬಿಐ ಕ್ರಮ ಜರುಗಿಸಲು ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...