Homeಮುಖಪುಟಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

- Advertisement -
- Advertisement -

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು ಜೊತೆ ಸೇರಿ ಆರ್‌ಜೆಡಿ ಮೈತ್ರಿ ಸರ್ಕಾರ ರಚಿಸಿದ ನಂತರದಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮತ್ತೆ ತೆರೆದಿದೆ.

ಲಾಲ್‌ ಪ್ರಸಾದ್‌ ಅವರು ಯುಪಿಎ ಮೊದಲ ಅವಧಿಯಲ್ಲಿ ಸಚಿವರಾಗಿದ್ದಾಗ ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪಗಳು ಬಂದಿದ್ದವು. 2018ರಲ್ಲಿ ಸಿಬಿಐ ತನಿಖೆಯನ್ನು ಪ್ರಾರಂಭಿಸಿತ್ತು.

“ಆರೋಪ ಮಾಡಲಾಗಿದ್ದರೂ ಯಾವುದೇ ಪ್ರಕರಣವಿಲ್ಲ” ಎಂದು ಸಿಬಿಐ ಮೂಲಗಳು ಹೇಳುವ ಮೂಲಕ ವಿಚಾರಣೆಯನ್ನು ಮೇ 2021 ರಲ್ಲಿ ಮುಚ್ಚಲಾಗಿತ್ತು. ಲಾಲೂ ಪ್ರಸಾದ್‌ ಅವರಲ್ಲದೆ, ಅವರ ಪುತ್ರ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಚಂದಾ ಯಾದವ್, ರಾಗಿಣಿ ಯಾದವ್ ಅವರ ಹೆಸರನ್ನೂ ಪ್ರಕರಣದಲ್ಲಿ ಸೇರಿಸಲಾಗಿತ್ತು.

ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಬಿಜೆಪಿಯಿಂದ ಬೇರ್ಪಟ್ಟು ಸರ್ಕಾರ ರಚಿಸಲು ಆರ್‌ಜೆಡಿ ಜೊತೆ ಕೈಜೋಡಿಸಿದ ನಂತರದಲ್ಲಿ ಪ್ರಕರಣವನ್ನು ಮತ್ತೆ ತೆರೆಯಲು ಸಿಬಿಐ ಮುಂದಾಗಿದೆ. ತಮ್ಮ ಪಕ್ಷವನ್ನು ವಿಭಜಿಸಲು ಬಿಜೆಪಿ ರೂಪಿಸಿರುವ ಯೋಜನೆ ಇದೆಂದು ನಿತೀಶ್‌ ಕುಮಾರ್‌ ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ತಮ್ಮ ಆರೋಪಗಳನ್ನು ಮಾಡುತ್ತಿರುವ ಹೊತ್ತಿನಲ್ಲಿ ಸಿಬಿಐನ ಹೊಸ ಕ್ರಮವು ಭಾರೀ ರಾಜಕೀಯ ಗದ್ದಲವನ್ನು ಹುಟ್ಟುಹಾಕುವ ಸಾಧ್ಯತೆ ಇದೆ.

ಮುಂಬೈನ ಬಾಂದ್ರಾದ ರೈಲು ಭೂಮಿ ಗುತ್ತಿಗೆ ಯೋಜನೆ ಮತ್ತು ಹೊಸ ದೆಹಲಿ ರೈಲು ನಿಲ್ದಾಣದ ನವೀಕರಣದ ಕಾರ್ಯದಲ್ಲಿ ಆಸಕ್ತಿ ಹೊಂದಿದ್ದ ರಿಯಲ್ ಎಸ್ಟೇಟ್ ಸಂಸ್ಥೆಯಾದ ಡಿಎಲ್‌ಎಫ್ ಗ್ರೂಪ್‌ನಿಂದ ಲಾಲು ಪ್ರಸಾದ್‌ ಯಾದವ್ ಅವರು ದಕ್ಷಿಣ ದೆಹಲಿಯ ಆಸ್ತಿಯನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.

ಶೆಲ್ ಕಂಪನಿಯು ₹ 5 ಕೋಟಿಗೆ ಆಸ್ತಿಯನ್ನು ಖರೀದಿಸಿದೆ. ಆದರೆ ಅಂದಿನ ಮಾರುಕಟ್ಟೆ ದರ ₹ 30 ಕೋಟಿಗಿಂತ ಕಡಿಮೆ ಇರಲಿಲ್ಲ ಎಂದು ದೂರಲಾಗಿದೆ.

ಶೆಲ್ ಕಂಪನಿಯನ್ನು ತೇಜಸ್ವಿ ಯಾದವ್ ಮತ್ತು ಲಾಲೂ ಪ್ರಸಾದ್‌ ಯಾದವ್ ಅವರ ಇತರ ಸಂಬಂಧಿಕರು ಷೇರುಗಳ ವರ್ಗಾವಣೆಯ ಮೂಲಕ ಕೇವಲ ₹ 4 ಲಕ್ಷಕ್ಕೆ ಖರೀದಿಸಿದರು. ಅವರಿಗೆ ದಕ್ಷಿಣ ದೆಹಲಿ ಬಂಗಲೆಯ ಮಾಲೀಕತ್ವವನ್ನು ನೀಡಲಾಯಿತು ಎಂದು ಆರೋಪಿಸಲಾಗಿದೆ.

73 ವರ್ಷದ ಲಾಲು ಅವರು ಈ ತಿಂಗಳ ಆರಂಭದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಬಿಐ ಕ್ರಮ ಜರುಗಿಸಲು ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...