Homeಮುಖಪುಟಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

- Advertisement -
- Advertisement -

ಬಿಹಾರದಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು ಜೊತೆ ಸೇರಿ ಆರ್‌ಜೆಡಿ ಮೈತ್ರಿ ಸರ್ಕಾರ ರಚಿಸಿದ ನಂತರದಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಮತ್ತೆ ತೆರೆದಿದೆ.

ಲಾಲ್‌ ಪ್ರಸಾದ್‌ ಅವರು ಯುಪಿಎ ಮೊದಲ ಅವಧಿಯಲ್ಲಿ ಸಚಿವರಾಗಿದ್ದಾಗ ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪಗಳು ಬಂದಿದ್ದವು. 2018ರಲ್ಲಿ ಸಿಬಿಐ ತನಿಖೆಯನ್ನು ಪ್ರಾರಂಭಿಸಿತ್ತು.

“ಆರೋಪ ಮಾಡಲಾಗಿದ್ದರೂ ಯಾವುದೇ ಪ್ರಕರಣವಿಲ್ಲ” ಎಂದು ಸಿಬಿಐ ಮೂಲಗಳು ಹೇಳುವ ಮೂಲಕ ವಿಚಾರಣೆಯನ್ನು ಮೇ 2021 ರಲ್ಲಿ ಮುಚ್ಚಲಾಗಿತ್ತು. ಲಾಲೂ ಪ್ರಸಾದ್‌ ಅವರಲ್ಲದೆ, ಅವರ ಪುತ್ರ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಚಂದಾ ಯಾದವ್, ರಾಗಿಣಿ ಯಾದವ್ ಅವರ ಹೆಸರನ್ನೂ ಪ್ರಕರಣದಲ್ಲಿ ಸೇರಿಸಲಾಗಿತ್ತು.

ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಬಿಜೆಪಿಯಿಂದ ಬೇರ್ಪಟ್ಟು ಸರ್ಕಾರ ರಚಿಸಲು ಆರ್‌ಜೆಡಿ ಜೊತೆ ಕೈಜೋಡಿಸಿದ ನಂತರದಲ್ಲಿ ಪ್ರಕರಣವನ್ನು ಮತ್ತೆ ತೆರೆಯಲು ಸಿಬಿಐ ಮುಂದಾಗಿದೆ. ತಮ್ಮ ಪಕ್ಷವನ್ನು ವಿಭಜಿಸಲು ಬಿಜೆಪಿ ರೂಪಿಸಿರುವ ಯೋಜನೆ ಇದೆಂದು ನಿತೀಶ್‌ ಕುಮಾರ್‌ ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ತಮ್ಮ ಆರೋಪಗಳನ್ನು ಮಾಡುತ್ತಿರುವ ಹೊತ್ತಿನಲ್ಲಿ ಸಿಬಿಐನ ಹೊಸ ಕ್ರಮವು ಭಾರೀ ರಾಜಕೀಯ ಗದ್ದಲವನ್ನು ಹುಟ್ಟುಹಾಕುವ ಸಾಧ್ಯತೆ ಇದೆ.

ಮುಂಬೈನ ಬಾಂದ್ರಾದ ರೈಲು ಭೂಮಿ ಗುತ್ತಿಗೆ ಯೋಜನೆ ಮತ್ತು ಹೊಸ ದೆಹಲಿ ರೈಲು ನಿಲ್ದಾಣದ ನವೀಕರಣದ ಕಾರ್ಯದಲ್ಲಿ ಆಸಕ್ತಿ ಹೊಂದಿದ್ದ ರಿಯಲ್ ಎಸ್ಟೇಟ್ ಸಂಸ್ಥೆಯಾದ ಡಿಎಲ್‌ಎಫ್ ಗ್ರೂಪ್‌ನಿಂದ ಲಾಲು ಪ್ರಸಾದ್‌ ಯಾದವ್ ಅವರು ದಕ್ಷಿಣ ದೆಹಲಿಯ ಆಸ್ತಿಯನ್ನು ಲಂಚವಾಗಿ ಸ್ವೀಕರಿಸಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.

ಶೆಲ್ ಕಂಪನಿಯು ₹ 5 ಕೋಟಿಗೆ ಆಸ್ತಿಯನ್ನು ಖರೀದಿಸಿದೆ. ಆದರೆ ಅಂದಿನ ಮಾರುಕಟ್ಟೆ ದರ ₹ 30 ಕೋಟಿಗಿಂತ ಕಡಿಮೆ ಇರಲಿಲ್ಲ ಎಂದು ದೂರಲಾಗಿದೆ.

ಶೆಲ್ ಕಂಪನಿಯನ್ನು ತೇಜಸ್ವಿ ಯಾದವ್ ಮತ್ತು ಲಾಲೂ ಪ್ರಸಾದ್‌ ಯಾದವ್ ಅವರ ಇತರ ಸಂಬಂಧಿಕರು ಷೇರುಗಳ ವರ್ಗಾವಣೆಯ ಮೂಲಕ ಕೇವಲ ₹ 4 ಲಕ್ಷಕ್ಕೆ ಖರೀದಿಸಿದರು. ಅವರಿಗೆ ದಕ್ಷಿಣ ದೆಹಲಿ ಬಂಗಲೆಯ ಮಾಲೀಕತ್ವವನ್ನು ನೀಡಲಾಯಿತು ಎಂದು ಆರೋಪಿಸಲಾಗಿದೆ.

73 ವರ್ಷದ ಲಾಲು ಅವರು ಈ ತಿಂಗಳ ಆರಂಭದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಬಿಐ ಕ್ರಮ ಜರುಗಿಸಲು ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...