Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...