Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...