Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...