Homeಮುಖಪುಟದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

- Advertisement -
- Advertisement -

“ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ” ಎಂದು ಬಸವರಾಜ ಬೊಮ್ಮಾಯಿಯವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಈ ಅನ್ಯಾಯಕ್ಕೆ ಯಾರು ಹೊಣೆ? ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ? ಉತ್ತರ ಕೊಡಿ. ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ? ಧರ್ಮರಕ್ಷಣೆ ಎನ್ನುವುದು ಮುಖವಾಡ, ಭ್ರಷ್ಟಾಚಾರ ಅಸಲಿ ಮುಖವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದಾರೆ.

ಮುಂದುವರಿದು, “ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಗೋವಿನ ಮೇವಿನಲ್ಲೂ ಕಮಿಷನ್‌

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಷ್ಟೇ ಅಲ್ಲ ಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರ ಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....