Homeಮುಖಪುಟದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

- Advertisement -
- Advertisement -

“ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ” ಎಂದು ಬಸವರಾಜ ಬೊಮ್ಮಾಯಿಯವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಈ ಅನ್ಯಾಯಕ್ಕೆ ಯಾರು ಹೊಣೆ? ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ? ಉತ್ತರ ಕೊಡಿ. ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ? ಧರ್ಮರಕ್ಷಣೆ ಎನ್ನುವುದು ಮುಖವಾಡ, ಭ್ರಷ್ಟಾಚಾರ ಅಸಲಿ ಮುಖವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದಾರೆ.

ಮುಂದುವರಿದು, “ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಗೋವಿನ ಮೇವಿನಲ್ಲೂ ಕಮಿಷನ್‌

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಷ್ಟೇ ಅಲ್ಲ ಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರ ಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...