Homeಮುಖಪುಟದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

- Advertisement -
- Advertisement -

“ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ” ಎಂದು ಬಸವರಾಜ ಬೊಮ್ಮಾಯಿಯವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಈ ಅನ್ಯಾಯಕ್ಕೆ ಯಾರು ಹೊಣೆ? ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ? ಉತ್ತರ ಕೊಡಿ. ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ? ಧರ್ಮರಕ್ಷಣೆ ಎನ್ನುವುದು ಮುಖವಾಡ, ಭ್ರಷ್ಟಾಚಾರ ಅಸಲಿ ಮುಖವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದಾರೆ.

ಮುಂದುವರಿದು, “ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಗೋವಿನ ಮೇವಿನಲ್ಲೂ ಕಮಿಷನ್‌

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅಷ್ಟೇ ಅಲ್ಲ ಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರ ಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...