Homeಮುಖಪುಟದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

- Advertisement -
- Advertisement -

“ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ” ಎಂದು ಬಸವರಾಜ ಬೊಮ್ಮಾಯಿಯವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಈ ಅನ್ಯಾಯಕ್ಕೆ ಯಾರು ಹೊಣೆ? ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ? ಉತ್ತರ ಕೊಡಿ. ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ? ಧರ್ಮರಕ್ಷಣೆ ಎನ್ನುವುದು ಮುಖವಾಡ, ಭ್ರಷ್ಟಾಚಾರ ಅಸಲಿ ಮುಖವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದಾರೆ.

ಮುಂದುವರಿದು, “ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಗೋವಿನ ಮೇವಿನಲ್ಲೂ ಕಮಿಷನ್‌

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಷ್ಟೇ ಅಲ್ಲ ಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರ ಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...